ಬೆಂಗಳೂರು : ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ನವೆಂಬರ್ 20 ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದ್ದು, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಇದನ್ನೂ ಓದಿ:-ಜೆಡಿಎಸ್ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ
ಎಲ್ಲಿ ದಂಡ ಕಟ್ಟಬೇಕು?
ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್ಸೈಟ್ಗಳಲ್ಲಿ ವಿವರ ಪಡೆದು ಪಾವತಿಸಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಇನ್ನು ಆನ್ಲೈನ್ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್ಪಿ) ಆ್ಯಪ್ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…