ರಾಜ್ಯ

ಶಿಕ್ಷಣ ಅನುದಾನದಲ್ಲೂ ಕೇಂದ್ರದಿಂದ ತಾರತಮ್ಯ: ಮಧು ಬಂಗಾರಪ್ಪ

ಮೈಸೂರು: ಸಮಗ್ರ ಶಿಕ್ಷಣ ಅಭಿಯಾನದಡಿ ನೀಡುವ ಅನುದಾನದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಈ ಬಗ್ಗೆ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಅಡಿ ಪ್ರತಿ ಮಗುವಿಗೆ ಕೇಂದ್ರ ಸರ್ಕಾರವು ತಮಿಳುನಾಡು, ಗುಜರಾತ್ ಮೊದಲಾದ ರಾಜ್ಯಗಳಿಗೆ ವಾರ್ಷಿಕ 5500-6000 ರೂಪಾಯಿ ನೀಡುತ್ತಿದೆ. ಆದರೆ ಕರ್ನಾಟಕಕ್ಕೆ ಮಾತ್ರ ಪ್ರತಿ ಮಗುವಿಗೆ 2400-2800 ರೂಪಾಯಿ ನಿಗದಿ ಪಡಿಸಿದೆ. ಆ ಅನುದಾನವನ್ನೂ ಬಿಡುಗಡೆ ಮಾಡಿಲ್ಲ. ಹಲವು ಬಾರಿ ಅಧಿಕಾರಿಗಳ ತಂಡ ದೆಹಲಿಗೆ ತೆರಳಿ ಈ ಸಂಬಂಧ ಮನವಿ ನೀಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವರ ಭೇಟಿಗೆ ನಾನೂ ಸಮಯ ಕೇಳಿದ್ದೇನೆ. ಆದರೆ ಈವರೆಗೆ ಅವಕಾಶ ದೊರೆತಿಲ್ಲ ಎಂದು ಹೇಳಿದರು.

ರಾಗಿ ಮಾಲ್ಟ್ ವಿತರಣೆ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲಿನೊಂದಿಗೆ ರಾಗಿ ಮಾಲ್ಟ್ ವಿತರಣೆಗೆ ಇನ್ನು 10-15 ದಿನದಲ್ಲಿ ಚಾಲನೆ ನೀಡಲಾಗುವುದು. ಮೈಸೂರಿನ ಸಿಎಫ್‌ಟಿಆರ್‌ಐ ನಿಂದ ಪ್ರಮಾಣಿಕೃತಗೊಂಡಿರುವ ರಾಗಿ ಮಾಲ್ಟನ್ನು ಕ್ಷೀರ ಭಾಗ್ಯ ಯೋಜನೆ ಅಡಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೀಡಲಾಗುವುದು. ಬಜೆಟ್ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ಹಾಗೂ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುವುದು. ಈಗ ವಾರಕ್ಕೆ ಒಂದು ದಿನ ಮೊಟ್ಟೆ ನೀಡುತ್ತಿದ್ದು, ಇನ್ನೊಂದು ದಿನ ಹೆಚ್ಚಿಗೆ ನೀಡುವುದರಿಂದ 160 ಕೋಟಿ ಹೆಚ್ಚುವರಿ ಹಣ ಬೇಕಾಗುತ್ತದೆ. ಇದನ್ನು ಸಿಎಸ್ ಆ‌ರ್ ನಿಧಿಯಿಂದ ಸಂಗ್ರಹಿಸಲಾಗುವುದು ಎಂದರು.

ನೀಟ್ ತರಬೇತಿ: ಸರ್ಕಾರದಿಂದಲೇ ಕೇಂದ್ರಗಳನ್ನು ತೆರೆದು ಮಕ್ಕಳಿಗೆ ನೀಟ್ (NEET) ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago