ರಾಜ್ಯ

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು.

ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್ ಸರ್ಜಿ ಅವರು ವಿಷಯ ಪ್ರಸ್ತಾಪಿಸಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ವಿಷಯವನ್ನು ಸಹ ಅವರು ಪ್ರಸ್ತಾಪ ಮಾಡಿದರು. ನಟ ದರ್ಶನ್ ಪ್ರಕರಣವೂ ಉಲ್ಲೇಖ ಮಾಡಿ, ಖೈದಿಗಳಿಗೆ ರಾಜಾತಿಥ್ಯದ ವಿಚಾರ ಜಗಜ್ಜಾಹಿರಾಗಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಸಾಮಾಜಿಕ ಜಾಲತಾಣ ನಗೆಪಾಟಲಿಗಿಡಾಗಿದೆ. ಆದರೆ ಜೈಲುಗಳ ಸುಧಾರಣೆಗೆ ಸಮಿತಿ ವರದಿ ನೀಡಿದೆ. ವರದಿ ನೀಡಿ ವರ್ಷಗಳೇ ಕಳೆದರೂ ಸರ್ಕಾರದ ಕವಾಟಿನಲ್ಲಿ ಧೂಳು ತಿನ್ನುತ್ತಿವೆ ಎಂದರು.

ಇದೇ ಸಮಯದಲ್ಲಿ ಸರ್ಕಾರ ಮತ್ತೊಂದು ಹೊಸದಾಗಿ ಸಮಿತಿ ರಚನೆ ಮಾಡಿ ಆದೇಶಿಸಿದೆ. ೨೦೧೭ ಅದೇ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ರಾಜಕಾರಣಿಗೆ ವಿಐಪಿ ಸೌಲಭ್ಯ ನೀಡಲಾಗಿತ್ತು. ೨೦೨೨ರಲ್ಲಿ ಶಂಕಿತ ಉಗ್ರರು ಹಾಗೂ ಖೈದಿಗಳು ಮೊಬೈಲ್ ಬಳಕೆ ಬಗ್ಗೆ ಮಾಡಿದ್ದರು. ವಿಡಿಯೋ ಬಯಲಾಗಿದ್ದಾಗ ಎಡಿಜಿಪಿ ಮುರುಗನ್ ಸಮಿತಿ ರಚನೆಯಾಗಿ ವರದಿ ನೀಡಿದರು, ಆದರೆ ಅಧಿಕಾರಗಳ ವರ್ಗಾವಣೆ ಬಿಟ್ಟು ಯಾವುದೇ ಸುಧಾರಣೆ ಆಗಲಿಲ್ಲ ಎಂದು ಆಕ್ಷೇಪಿಸಿದರು.

ಕಳೆದ ವರ್ಷವೂ ನಟ ದರ್ಶನ್ ಹಾಗೂ ಅವರ ಸಹಚರರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜ್ಯಾತಿ ನೀಡಲಾಗಿದೆ ಎಂಬ ಆರೋಪ ಬಂದಿತ್ತು. ಅಂದು ಸಿಸಿಬಿ ಮುಖ್ಯಸ್ತರಾಗಿದ್ದ ಐಜಿಪಿ ಡಾ.ಚಂದ್ರಗುಪ್ತ ನೇತೃತ್ತದ ಸಮಿತಿಯನ್ನು ಇದೇ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದ್ದು. ಅವರು ಸುದೀರ್ಘ ಅಧ್ಯಯನದೊಂದಿಗೆ ೪ ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಅನೇಕ ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ವರದಿ ಕಪಾಟು ಸೇರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ತನ್ನ ವಿಫಲತೆಯನ್ನು ಮರೆಮಾಚಲು ಸಮಿತಿಯ ಮೇಲೊಂದು ಸಮಿತಿ ನೇಮಕ ಮಾಡುವುದನ್ನು ಬಿಟ್ಟು ಈಗಾಗಲೇ ಸಮಿತಿಗಳು ನೀಡಿರುವ ವರದಿ ಅನುಷ್ಠಾನ ಮಾಡಿ ಎಂದು ಸರ್ಜಿ ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

1 hour ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

1 hour ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago