ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು.
ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್ ಸರ್ಜಿ ಅವರು ವಿಷಯ ಪ್ರಸ್ತಾಪಿಸಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ವಿಷಯವನ್ನು ಸಹ ಅವರು ಪ್ರಸ್ತಾಪ ಮಾಡಿದರು. ನಟ ದರ್ಶನ್ ಪ್ರಕರಣವೂ ಉಲ್ಲೇಖ ಮಾಡಿ, ಖೈದಿಗಳಿಗೆ ರಾಜಾತಿಥ್ಯದ ವಿಚಾರ ಜಗಜ್ಜಾಹಿರಾಗಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಸಾಮಾಜಿಕ ಜಾಲತಾಣ ನಗೆಪಾಟಲಿಗಿಡಾಗಿದೆ. ಆದರೆ ಜೈಲುಗಳ ಸುಧಾರಣೆಗೆ ಸಮಿತಿ ವರದಿ ನೀಡಿದೆ. ವರದಿ ನೀಡಿ ವರ್ಷಗಳೇ ಕಳೆದರೂ ಸರ್ಕಾರದ ಕವಾಟಿನಲ್ಲಿ ಧೂಳು ತಿನ್ನುತ್ತಿವೆ ಎಂದರು.
ಇದೇ ಸಮಯದಲ್ಲಿ ಸರ್ಕಾರ ಮತ್ತೊಂದು ಹೊಸದಾಗಿ ಸಮಿತಿ ರಚನೆ ಮಾಡಿ ಆದೇಶಿಸಿದೆ. ೨೦೧೭ ಅದೇ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ರಾಜಕಾರಣಿಗೆ ವಿಐಪಿ ಸೌಲಭ್ಯ ನೀಡಲಾಗಿತ್ತು. ೨೦೨೨ರಲ್ಲಿ ಶಂಕಿತ ಉಗ್ರರು ಹಾಗೂ ಖೈದಿಗಳು ಮೊಬೈಲ್ ಬಳಕೆ ಬಗ್ಗೆ ಮಾಡಿದ್ದರು. ವಿಡಿಯೋ ಬಯಲಾಗಿದ್ದಾಗ ಎಡಿಜಿಪಿ ಮುರುಗನ್ ಸಮಿತಿ ರಚನೆಯಾಗಿ ವರದಿ ನೀಡಿದರು, ಆದರೆ ಅಧಿಕಾರಗಳ ವರ್ಗಾವಣೆ ಬಿಟ್ಟು ಯಾವುದೇ ಸುಧಾರಣೆ ಆಗಲಿಲ್ಲ ಎಂದು ಆಕ್ಷೇಪಿಸಿದರು.
ಕಳೆದ ವರ್ಷವೂ ನಟ ದರ್ಶನ್ ಹಾಗೂ ಅವರ ಸಹಚರರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜ್ಯಾತಿ ನೀಡಲಾಗಿದೆ ಎಂಬ ಆರೋಪ ಬಂದಿತ್ತು. ಅಂದು ಸಿಸಿಬಿ ಮುಖ್ಯಸ್ತರಾಗಿದ್ದ ಐಜಿಪಿ ಡಾ.ಚಂದ್ರಗುಪ್ತ ನೇತೃತ್ತದ ಸಮಿತಿಯನ್ನು ಇದೇ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದ್ದು. ಅವರು ಸುದೀರ್ಘ ಅಧ್ಯಯನದೊಂದಿಗೆ ೪ ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಅನೇಕ ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ವರದಿ ಕಪಾಟು ಸೇರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ತನ್ನ ವಿಫಲತೆಯನ್ನು ಮರೆಮಾಚಲು ಸಮಿತಿಯ ಮೇಲೊಂದು ಸಮಿತಿ ನೇಮಕ ಮಾಡುವುದನ್ನು ಬಿಟ್ಟು ಈಗಾಗಲೇ ಸಮಿತಿಗಳು ನೀಡಿರುವ ವರದಿ ಅನುಷ್ಠಾನ ಮಾಡಿ ಎಂದು ಸರ್ಜಿ ಒತ್ತಾಯಿಸಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…