ರಾಜ್ಯ

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು.

ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್ ಸರ್ಜಿ ಅವರು ವಿಷಯ ಪ್ರಸ್ತಾಪಿಸಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ವಿಷಯವನ್ನು ಸಹ ಅವರು ಪ್ರಸ್ತಾಪ ಮಾಡಿದರು. ನಟ ದರ್ಶನ್ ಪ್ರಕರಣವೂ ಉಲ್ಲೇಖ ಮಾಡಿ, ಖೈದಿಗಳಿಗೆ ರಾಜಾತಿಥ್ಯದ ವಿಚಾರ ಜಗಜ್ಜಾಹಿರಾಗಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಸಾಮಾಜಿಕ ಜಾಲತಾಣ ನಗೆಪಾಟಲಿಗಿಡಾಗಿದೆ. ಆದರೆ ಜೈಲುಗಳ ಸುಧಾರಣೆಗೆ ಸಮಿತಿ ವರದಿ ನೀಡಿದೆ. ವರದಿ ನೀಡಿ ವರ್ಷಗಳೇ ಕಳೆದರೂ ಸರ್ಕಾರದ ಕವಾಟಿನಲ್ಲಿ ಧೂಳು ತಿನ್ನುತ್ತಿವೆ ಎಂದರು.

ಇದೇ ಸಮಯದಲ್ಲಿ ಸರ್ಕಾರ ಮತ್ತೊಂದು ಹೊಸದಾಗಿ ಸಮಿತಿ ರಚನೆ ಮಾಡಿ ಆದೇಶಿಸಿದೆ. ೨೦೧೭ ಅದೇ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ರಾಜಕಾರಣಿಗೆ ವಿಐಪಿ ಸೌಲಭ್ಯ ನೀಡಲಾಗಿತ್ತು. ೨೦೨೨ರಲ್ಲಿ ಶಂಕಿತ ಉಗ್ರರು ಹಾಗೂ ಖೈದಿಗಳು ಮೊಬೈಲ್ ಬಳಕೆ ಬಗ್ಗೆ ಮಾಡಿದ್ದರು. ವಿಡಿಯೋ ಬಯಲಾಗಿದ್ದಾಗ ಎಡಿಜಿಪಿ ಮುರುಗನ್ ಸಮಿತಿ ರಚನೆಯಾಗಿ ವರದಿ ನೀಡಿದರು, ಆದರೆ ಅಧಿಕಾರಗಳ ವರ್ಗಾವಣೆ ಬಿಟ್ಟು ಯಾವುದೇ ಸುಧಾರಣೆ ಆಗಲಿಲ್ಲ ಎಂದು ಆಕ್ಷೇಪಿಸಿದರು.

ಕಳೆದ ವರ್ಷವೂ ನಟ ದರ್ಶನ್ ಹಾಗೂ ಅವರ ಸಹಚರರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜ್ಯಾತಿ ನೀಡಲಾಗಿದೆ ಎಂಬ ಆರೋಪ ಬಂದಿತ್ತು. ಅಂದು ಸಿಸಿಬಿ ಮುಖ್ಯಸ್ತರಾಗಿದ್ದ ಐಜಿಪಿ ಡಾ.ಚಂದ್ರಗುಪ್ತ ನೇತೃತ್ತದ ಸಮಿತಿಯನ್ನು ಇದೇ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದ್ದು. ಅವರು ಸುದೀರ್ಘ ಅಧ್ಯಯನದೊಂದಿಗೆ ೪ ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಅನೇಕ ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ವರದಿ ಕಪಾಟು ಸೇರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ತನ್ನ ವಿಫಲತೆಯನ್ನು ಮರೆಮಾಚಲು ಸಮಿತಿಯ ಮೇಲೊಂದು ಸಮಿತಿ ನೇಮಕ ಮಾಡುವುದನ್ನು ಬಿಟ್ಟು ಈಗಾಗಲೇ ಸಮಿತಿಗಳು ನೀಡಿರುವ ವರದಿ ಅನುಷ್ಠಾನ ಮಾಡಿ ಎಂದು ಸರ್ಜಿ ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

2 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

2 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

3 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

3 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

3 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

4 hours ago