Discussion between Mandya farmer leaders and Deputy CM D.K. Shivakumar
ಬೆಂಗಳೂರು: ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ ಮಹತ್ವ ಹಾಗೂ ಅದರಿಂದಾಗುವ ಆರ್ಥಿಕ ಅಭಿವೃದ್ಧಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಮಂಡ್ಯ ರೈತ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.
ರೈತರ ಜೀವನಾಡಿ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಮಾಡಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಯಾವುದೇ ಕಾರಣಕ್ಕೂ ಕಾವೇರಿ ಆರತಿ ಮಾಡಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲೆಯ ರೈತ ಮುಖಂಡರು, ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ ಮಹತ್ವ, ಅದರಿಂದಾಗುವ ಧಾರ್ಮಿಕ, ಸಾಂಸ್ಕೃತಿಕ, ಕಲೆ, ಪ್ರವಾಸೋದ್ಯಮ, ಆರ್ಥಿಕ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವ ಶಿವರಾಜ್ ತಂಗಡಗಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಕಾವೇರಿ ಆರತಿ ಕಾರ್ಯಕ್ರಮ ರೂಪುರೇಷೆ ಸಮಿತಿ ಹಾಗೂ ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷ ಡಾ ರಾಮ್ ಪ್ರಸಾದ್ ಮನೋಹರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ರೈತ ಸಂಘಟನೆಗಳು ಹಾಗೂ ನಾನಾ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…