ರಾಜ್ಯ

ನಾಯಕತ್ವ ಬದಲಾವಣೆ ಚರ್ಚೆ ಅನಗತ್ಯ : ಸಿಎಂ ಪರ ಬ್ಯಾಟ್‌ ಬೀಸಿದ‌ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ನಾಯಕತ್ವ ಬದಲಾವಣೆಯ ಚರ್ಚೆಗಳು ಅನಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರೂ ತಮ್ಮದೇ ಆದಂತಹ ಕೊಡುಗೆ ನೀಡಿದ್ದಾರೆ. ಸದ್ಯಕ್ಕೆ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಸಿದ್ದರಾಮಯ್ಯ, ಶಿವಕುಮಾರ್ ಹೇಳಿರುವುದರಿಂದ ಈ ರೀತಿ ಚರ್ಚೆಗಳು ಅಪ್ರಸ್ತುತ. ತಮಗೆ ಸಚಿವ ಸ್ಥಾನದ ಮೇಲೆ ವ್ಯಾಮೋಹ ಇಲ್ಲ. ರಾಜೀನಾಮೆ ಕೊಟ್ಟು ಪಕ್ಷದ ಸಂಘಟನೆ ಮಾಡಿ ಎಂದರೆ ಅದಕ್ಕೂ ನಾನು ಸಿದ್ಧ ಎಂದರು.

ಇದನ್ನು ಓದಿ:ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್ ಹೇಳಿಕೆಯೇ ಅಂತಿಮ ಎಂದ ಸಿಎಂ ಸಿದ್ದರಾಮಯ್ಯ 

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವ ಮೈತ್ರಿಕೂಟಕ್ಕೆ ಗೆಲುವಾಗುವ ವಿಶ್ವಾಸವಿದೆ. ನಾವು ಪ್ರಬಲ ಪೈಪೋಟಿ ನೀಡಿದ್ದೇವೆ. ಬಿಹಾರ ಸರ್ಕಾರ, ಚುನಾವಣೆಗೂ ಮೊದಲೇ ಸರ್ಕಾರದ ಹಣವನ್ನು ಮಹಿಳೆಯರ ಖಾತೆಗೆ ತಲಾ ೧೦ ಸಾವಿರ ರೂ.ಗಳಂತೆ ಹಂಚಿದೆ. ಇದು ಮೋದಿ ನೇತೃತ್ವದಲ್ಲಿ ನಡೆದ ಕಾನೂನುಬದ್ಧ ಭ್ರಷ್ಟಚಾರ ಎಂದು ವಾಗ್ದಾಳಿ ನಡೆಸಿದರು.

ಆರ್‌ಎಸ್‌ಎಸ್ ನಿಷೇಧಿಸಬೇಕೆಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿರುವುದಕ್ಕೆ ತಾವು ಪ್ರತಿಕ್ರಿಯಿಸುವುದಿಲ್ಲ. ಆರ್‌ಎಸ್‌ಎಸ್ ನಿಷೇಧವಾಗಬೇಕು ಎಂದು ಹೇಳುವುದಿಲ್ಲ. ಈ ದೇಶದಲ್ಲಿ ಪ್ರತಿಯೊಂದು ಸಂಘಟನೆಗೂ ತಮ್ಮ ಚಟುವಟಿಕೆಗಳನ್ನು ನಡೆಸಲು ಅವಕಾಶ ಇದೆ. ಸಂಘ ಪರಿವಾರ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಚಟುವಟಿಕೆಗಳನ್ನು ನಡೆಸಿರುವ ಇತಿಹಾಸ ಹೊಂದಿದೆ. ಆದರೆ ಯಾವತ್ತೂ ಸಂಘಪರಿವಾರ ಸಮಾಜದ ಒಗ್ಗೂಡುವಿಕೆಗೆ ಪ್ರಯತ್ನಿಸಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

36 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago