ರಾಜ್ಯ

ಒಳ ಮೀಸಲಾತಿ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ಅವರ ನೇತೃತ್ವದ ಅಯೋಗ ಇಂದು ತನ್ನ ವರದಿಯನ್ನು ಸಲ್ಲಿಸಿದ್ದು, ಆಗಸ್ಟ್ 7ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವರದಿ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾ. ನಾಗಮೋಹನ್‍ದಾಸ್ ಅವರ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ತಮನ್ನು ಭೇಟಿ ಮಾಡಿ ವರದಿ ಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟಸಭೆಯಲ್ಲಿ ಇದರ ಮಂಡನೆಯಾಗಲಿದೆ ಎಂದರು.

ಸಮೀಕ್ಷೆ ವರದಿ ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಯಾರೂ ಹೇಳಿಲ್ಲ. ಅಂತಹ ಯಾವ ಟೀಕೆಗಳು ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು, ಜು.1 ರಂದು ತಮ್ಮ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದ್ದು, ಮಾರ್ಚ್ 27ರಲ್ಲಿ ಮಧ್ಯಂತರ ವರದಿ ನೀಡಿದ ತಾವು ನಿಖರವಾದ ದತ್ತಾಂಶಗಳ ಕೊರತೆಯಿದೆ ಎಂದು ತಿಳಿಸಿದ್ದು, ಅದರಂತೆ ಹೊಸ ಸಮೀಕ್ಷೆಗೆ ಸಚಿವ ಸಂಪುಟಸಭೆ ಅನುಮತಿ ನೀಡಿತ್ತು ಎಂದರು.

ಮೇ 5ರಿಂದ 60 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ?ಯಪ್‍ನ್ನು ಬಳಸಿ 27 ಲಕ್ಷ ಕುಟುಂಬಗಳ 1.07ಕೋಟಿ ಜನರನ್ನು ಸಮೀಕ್ಷೆ ನಡೆಸಿದ್ದೇವೆ ಎಂದರು.

ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ದತ್ತಾಂಶ ಅನುಬಂಧ ಸೇರಿ 1766 ಪುಟಗಳ ವರದಿಯನ್ನು ಸಲ್ಲಿಸಿದ್ದೇವೆ. ಇನ್ನು ಮುಂದೆ ವರದಿ ಸರ್ಕಾರದ ಅಸ್ತಿಯಾಗಿದ್ದು ನನ್ನ ನಿಯಂತ್ರಣದಲ್ಲಿ ಇಲ್ಲ. ಯಾವುದೇ ವಿಚಾರಗಳಿದ್ದರೂ ಸರ್ಕಾರದ ಬಳಿಯೇ ಕೇಳಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

1 hour ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago