cm siddaramiha
ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಅವರ ನೇತೃತ್ವದ ಅಯೋಗ ಇಂದು ತನ್ನ ವರದಿಯನ್ನು ಸಲ್ಲಿಸಿದ್ದು, ಆಗಸ್ಟ್ 7ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವರದಿ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾ. ನಾಗಮೋಹನ್ದಾಸ್ ಅವರ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ತಮನ್ನು ಭೇಟಿ ಮಾಡಿ ವರದಿ ಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟಸಭೆಯಲ್ಲಿ ಇದರ ಮಂಡನೆಯಾಗಲಿದೆ ಎಂದರು.
ಸಮೀಕ್ಷೆ ವರದಿ ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಯಾರೂ ಹೇಳಿಲ್ಲ. ಅಂತಹ ಯಾವ ಟೀಕೆಗಳು ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು, ಜು.1 ರಂದು ತಮ್ಮ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದ್ದು, ಮಾರ್ಚ್ 27ರಲ್ಲಿ ಮಧ್ಯಂತರ ವರದಿ ನೀಡಿದ ತಾವು ನಿಖರವಾದ ದತ್ತಾಂಶಗಳ ಕೊರತೆಯಿದೆ ಎಂದು ತಿಳಿಸಿದ್ದು, ಅದರಂತೆ ಹೊಸ ಸಮೀಕ್ಷೆಗೆ ಸಚಿವ ಸಂಪುಟಸಭೆ ಅನುಮತಿ ನೀಡಿತ್ತು ಎಂದರು.
ಮೇ 5ರಿಂದ 60 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ?ಯಪ್ನ್ನು ಬಳಸಿ 27 ಲಕ್ಷ ಕುಟುಂಬಗಳ 1.07ಕೋಟಿ ಜನರನ್ನು ಸಮೀಕ್ಷೆ ನಡೆಸಿದ್ದೇವೆ ಎಂದರು.
ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ದತ್ತಾಂಶ ಅನುಬಂಧ ಸೇರಿ 1766 ಪುಟಗಳ ವರದಿಯನ್ನು ಸಲ್ಲಿಸಿದ್ದೇವೆ. ಇನ್ನು ಮುಂದೆ ವರದಿ ಸರ್ಕಾರದ ಅಸ್ತಿಯಾಗಿದ್ದು ನನ್ನ ನಿಯಂತ್ರಣದಲ್ಲಿ ಇಲ್ಲ. ಯಾವುದೇ ವಿಚಾರಗಳಿದ್ದರೂ ಸರ್ಕಾರದ ಬಳಿಯೇ ಕೇಳಿ ಎಂದು ಹೇಳಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…