ರಾಜ್ಯ

ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ: ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆಗಸ್ಟ್ 24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು.

ರಾಜ್ಯಪಾಲರ ನಡೆಯ ವಿರುದ್ಧ ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ ಚರ್ಚೆಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ ಎಂದರು.

ಸರ್ಕಾರ ಸಲ್ಲಿಸಿದ ಬಿಲ್ ಗಳನ್ನು ರಾಜ್ಯಪಾಲರು ವಾಪಸ್ಸು ಕಳಿಸಿದ್ಧು, ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ಪ್ರಾರಂಭವಾಗಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಆರು ಮಸೂದೆಗಳನ್ನು ವಾಪಸ್ಸು ಕಳಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಸಚಿವಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ , ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ದರ ಹೆಚ್ಚಳದ ಬಗ್ಗೆ ಚರ್ಚಿಸಿ ಕ್ರಮ: ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

4 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

7 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

8 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

8 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

8 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

8 hours ago