ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ , ಗೃಹಜ್ಯೋತಿ ಯೋಜನೆಗಳ ಜಾಹೀರಾತು ಮತ್ತು ಒಪ್ಪಿಗೆ ಆದೇಶಗಳಲ್ಲಿ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳ ಭಾವಚಿತ್ರ, ಹೆಸರು ಬಳಕೆಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ.
ಬೆಳಗಾವಿ ಮೂಲದ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಎಸ್.ಉಮಾಪತಿ ಅವರು, ಗೃಹ ಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಭಾವಚಿತ್ರ ಮತ್ತು ಹೆಸರು ಬಳಕೆ ಮಾಡಲಾಗುತ್ತದೆ. ಸರಕಾರಿ ಜಾಹೀರಾತುಗಳಲ್ಲಿ ಇವರುಗಳ ಭಾವಚಿತ್ರ ಬಳಸದಂತೆ ಸುಪ್ರೀಂ ಕೋರ್ಟ್ ಆದೇಶವಿದೆ. ಇದನ್ನು ಉಲ್ಲಂಘಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾವಚಿತ್ರ ಬಳಕೆ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ. ಆ ಮೂಲಕ ಸರಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪೀಠವು ಜನರಿಗೆ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದವರು ಸಹಜವಾಗಿ ಯಾವೆಲ್ಲಾ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸಲಾಗಿದೆ ಎಂಬ ಮಾಹಿತಿ ನೀಡುತ್ತಾರೆ. ಇದರಲ್ಲಿ ತಪ್ಪೇನಿದೆ. ಇದಕ್ಕೆ ನಿಮ್ಮ ಆಕ್ಷೇಪವೇನಾದರೂ ಇದ್ದರೆ ಅಂಥವರನ್ನು ಆಯ್ಕೆ ಮಾಡಬಾರದು ಎಂದು ತಿಳಿಸಿತು. ಜತೆಗೆ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾವಚಿತ್ರ ಬಳಕೆ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ. ಆ ಮೂಲಕ ಸರಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪೀಠವು ಜನರಿಗೆ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದವರು ಸಹಜವಾಗಿ ಯಾವೆಲ್ಲಾ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸಲಾಗಿದೆ ಎಂಬ ಮಾಹಿತಿ ನೀಡುತ್ತಾರೆ. ಇದರಲ್ಲಿ ತಪ್ಪೇನಿದೆ. ಇದಕ್ಕೆ ನಿಮ್ಮ ಆಕ್ಷೇಪವೇನಾದರೂ ಇದ್ದರೆ ಅಂಥವರನ್ನು ಆಯ್ಕೆ ಮಾಡಬಾರದು ಎಂದು ತಿಳಿಸಿತು. ಜತೆಗೆ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.