ಬೆಂಗಳೂರು: ಮೇಕೆದಾಟು ಯೋಜನೆಗೆ ಅಡ್ಡಿಪಡಿಸಿ, ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸುವ ಮೂಲಕ ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟೆ ನಿರ್ಮಿಸಿರುವ ರಾಜ್ಯದ ಸದುದ್ದೇಶಕ್ಕೆ ಸಿಹಿ ಸುದ್ದಿ ಕೇಳಿ ಬಂದಿದೆ ಎಂದರು.
ಇದನ್ನು ಓದಿ : ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಮತ್ತೊಂದು ಜಯ
ನಮ್ಮ ನೀರು ನಮ್ಮ ಹಕ್ಕು. ಕರ್ನಾಟಕಕ್ಕೆ ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಿಕ್ಕಿದೆ. ಜನರ ಭಾವನೆಗಳು ಮತ್ತು ಕಷ್ಟಗಳಿಗೆ ಸ್ಪಂದನೆ ದೊರಕಿದೆ. ಈ ತೀರ್ಪು ಮೇಕೆದಾಟು ಯೋಜನೆ ಮುಂದುವರಿಸಲು ಸಹಕಾರಿಯಾಗಬಹುದು ಎಂದು ಹೇಳಿದರು.
ಮೇಕೆದಾಟು ಯೋಜನೆಯಿಂದಾಗಿ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆದುಕೊಳ್ಳಲಿದೆ. ಕರ್ನಾಟಕ ಸರ್ಕಾರ ತನ್ನದೇ ನೆಲದಲ್ಲಿ ತಾನೇ ಹಣ ಖರ್ಚುಮಾಡಿ ಸಮತೋಲಿತ ಅಣೆಕಟ್ಟು ನಿರ್ಮಿಸುತ್ತದೆ. ಇದರಿಂದ ತಮಿಳುನಾಡಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಇಂತಹ ವಿಚಾರಗಳಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಕೇಂದ್ರ ಜಲ ಆಯೋಗ ಬಗೆಹರಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಯೋಜನೆಗೆ ಅನುಮತಿ ನೀಡದೆ ಕೇಂದ್ರ ಜಲ ಆಯೋಗಕ್ಕೆ ಬೇರೆ ಆಯ್ಕೆಗಳಿಲ್ಲ. ಹೀಗಾಗಿ ನಮಗೆ ನ್ಯಾಯ ಒದಗಿಸಿಕೊಡಲೇಬೇಕು ಎಂದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…