ರಾಜ್ಯ

ಸ್ಪೀಕರ್‌ ಪೀಠಕ್ಕೆ ಆಗೌರವ: ಬಿಜೆಪಿ 18 ಶಾಸಕರು 6 ತಿಂಗಳು ಅಮಾನತು

ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿ ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌ ಆದೇಶ ಹೊರಡಿಸಿದ್ದಾರೆ.

ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್‌ ಆದೇಶ ನೀಡಿದ್ದಾರೆ.

ಮುಸ್ಲಿಂರಿಗೆ ಮೀಸಲಾತಿ ನೀಡುವ ವಿಧೇಯಕ್ಕೆ ವಿರೋಧ ಹಾಗೂ ಹನಿಟ್ರ್ಯಾಪ್‌ ಆರೋಪವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಸದನದ ಭಾವಿಗಿಳಿದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿ ಸ್ಪೀಕರ್‌ ಯುಟಿ ಖಾದರ್‌ ಮೇಲೆ ಖಾಲಿ ಪೇಪರ್‌ ಎಸೆದಿದ್ದರು. ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ ಶಾಸಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅಮನತ್ತಾದ ಬಿಜೆಪಿ ಶಾಸಕರು ಇನ್ನು 6 ತಿಂಗಳವರೆಗೆ ವಿಧಾನಸಭೆಗೆ ಪ್ರವೇಶಿಸುವಂತಿಲ್ಲ. ಹಾಗೆಯೇ ಅವರ ದಿನದ ಭತ್ಯೆಗೂ ಕೋಕ್‌ ನೀಡಲಾಗಿದೆ. ಜೊತೆಗೆ ಸ್ಥಾಯಿ ಸಮಿತಿಗೆ ಅವಕಾಶಗಳಿಲ್ಲ ಎಂದು ಸ್ಪೀಕರ್‌ ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡ ಬಿಜೆಪಿ ಶಾಸಕರು:

ದೊಡ್ಡಗೌಡನ ಪಾಟೀಲ್‌, ಅಶ್ವತ್‌ ನಾರಾಯಣ್‌, ಎಸ್‌.ಆರ್‌.ವಿಶ್ವನಾಥ್‌, ಬಿಎ ಬಸವರಾಜ್‌, ಎಂ.ಆರ್.ಪಾಟೀಲ್‌, ಚೆನ್ನಬಸಪ್ಪ, ಬಿ.ಸುರೇಶಗೌಡ, ಉಮಾನಾಥ ಎ.ಕೋಟ್ಯಾನ್‌, ಶರಣು ಸರಲಗರ, ಸಿಕೆ ರಾಮಮೂರ್ತಿ, ಬಿಬಿ ಹರೀಶ್‌, ಮುನಿರತ್ನ, ಡಾ.ವೈ.ಭರತ್‌ ಶೆಟ್ಟಿ, ಬಸವರಾಜ ಮತ್ತಿಮೂಡ್‌, ಡಾ.ಚಂದ್ರು ಲಮಾಣಿ, ಡಾ.ಶೈಲೇಂದ್ರ ಬೆಲ್ದಾಳೆ, ಯಶಪಾಲ್‌ ಎ.ಸುವರ್ಣ, ಧೀರಜ್‌ ಮುನಿರಾಜು.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

6 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

6 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

6 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago