ರಾಜ್ಯ

ಸ್ಪೀಕರ್‌ ಪೀಠಕ್ಕೆ ಆಗೌರವ: ಬಿಜೆಪಿ 18 ಶಾಸಕರು 6 ತಿಂಗಳು ಅಮಾನತು

ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿ ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌ ಆದೇಶ ಹೊರಡಿಸಿದ್ದಾರೆ.

ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್‌ ಆದೇಶ ನೀಡಿದ್ದಾರೆ.

ಮುಸ್ಲಿಂರಿಗೆ ಮೀಸಲಾತಿ ನೀಡುವ ವಿಧೇಯಕ್ಕೆ ವಿರೋಧ ಹಾಗೂ ಹನಿಟ್ರ್ಯಾಪ್‌ ಆರೋಪವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಸದನದ ಭಾವಿಗಿಳಿದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿ ಸ್ಪೀಕರ್‌ ಯುಟಿ ಖಾದರ್‌ ಮೇಲೆ ಖಾಲಿ ಪೇಪರ್‌ ಎಸೆದಿದ್ದರು. ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ ಶಾಸಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅಮನತ್ತಾದ ಬಿಜೆಪಿ ಶಾಸಕರು ಇನ್ನು 6 ತಿಂಗಳವರೆಗೆ ವಿಧಾನಸಭೆಗೆ ಪ್ರವೇಶಿಸುವಂತಿಲ್ಲ. ಹಾಗೆಯೇ ಅವರ ದಿನದ ಭತ್ಯೆಗೂ ಕೋಕ್‌ ನೀಡಲಾಗಿದೆ. ಜೊತೆಗೆ ಸ್ಥಾಯಿ ಸಮಿತಿಗೆ ಅವಕಾಶಗಳಿಲ್ಲ ಎಂದು ಸ್ಪೀಕರ್‌ ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡ ಬಿಜೆಪಿ ಶಾಸಕರು:

ದೊಡ್ಡಗೌಡನ ಪಾಟೀಲ್‌, ಅಶ್ವತ್‌ ನಾರಾಯಣ್‌, ಎಸ್‌.ಆರ್‌.ವಿಶ್ವನಾಥ್‌, ಬಿಎ ಬಸವರಾಜ್‌, ಎಂ.ಆರ್.ಪಾಟೀಲ್‌, ಚೆನ್ನಬಸಪ್ಪ, ಬಿ.ಸುರೇಶಗೌಡ, ಉಮಾನಾಥ ಎ.ಕೋಟ್ಯಾನ್‌, ಶರಣು ಸರಲಗರ, ಸಿಕೆ ರಾಮಮೂರ್ತಿ, ಬಿಬಿ ಹರೀಶ್‌, ಮುನಿರತ್ನ, ಡಾ.ವೈ.ಭರತ್‌ ಶೆಟ್ಟಿ, ಬಸವರಾಜ ಮತ್ತಿಮೂಡ್‌, ಡಾ.ಚಂದ್ರು ಲಮಾಣಿ, ಡಾ.ಶೈಲೇಂದ್ರ ಬೆಲ್ದಾಳೆ, ಯಶಪಾಲ್‌ ಎ.ಸುವರ್ಣ, ಧೀರಜ್‌ ಮುನಿರಾಜು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago