ರಾಜ್ಯ

ಮಹಿಳಾ ವಿವಸ್ತ್ರ ಪ್ರಕರಣ : ಸ್ವಯಂ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸುವ ವೇಳೆ ಪೊಲೀಸರು ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ವಿವಸ್ತ್ರಗೊಳಿಸಿದ್ದರೆಂಬುದರ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ್ ರಹತ್ಕರ್ ಅವರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

ಇದು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ, ಲಿಂಗ ಆಧರಿತ ಹಿಂಸೆಯಿಂದ ರಕ್ಷಣೆಯ ಗಂಭೀರ ಉಲ್ಲಂಘನೆಯಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎ.ಸಲೀಂ ಅವರಿಗೆ ಪತ್ರ ಬರೆದಿದ್ದಾರೆ.

ಒಂದು ವೇಳೆ ಪ್ರಕರಣ ಕುರಿತು ಎಫ್‍ಐಆರ್ ದಾಖಲಾಗದಿದ್ದರೆ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ ನಿಷ್ಪಕ್ಷಪಾತ ತನಿಖೆಯನ್ನು ನಡೆಸಬೇಕೆಂದು ಸೂಚಿಸಿದ್ದಾರೆ.‌

ದುಷ್ಕತ್ಯ ಕಂಡುಬಂದಲ್ಲಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಘಟನೆಯಿಂದ ಮಾನಸಿಕವಾಗಿ ಕುಗ್ಗಿರುವ ಮಹಿಳೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ ವಸತಿ ಸೇರಿದಂತೆ ಪರಿಹಾರವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ಪೊಲೀಸ್‌ ಇಲಾಖೆ ಈವರೆಗೂ ಪ್ರಕರಣ ಕುರಿತು ತೆಗೆದುಕೊಂಡಿರುವ ವಿವರವಾದ ಕ್ರಮಗಳನ್ನು ಐದು ದಿನದೊಳಗೆ ಆಯೋಗಕ್ಕೆ ಸಲ್ಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರದಲ್ಲಿ ಅಧ್ಯಕ್ಷರು ಮನವಿ ಮಾಡಿದ್ದಾರೆ.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago