ಬೆಂಗಳೂರು: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 17ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 1-19ನೇ ವಯೋಮಾನದ ಎಲ್ಲಾ ಮಕ್ಕಳಿಗೆ ಮಾತ್ರೆ ವಿತರಣೆಗೆ ಸೂಚನೆ ನೀಡಲಾಗಿದೆ.
ನಾಳೆ ಜಂತುಹುಳು ನಿವಾರಕ ಮಾತ್ರೆಯನ್ನು ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಕೊಡಲಾಗುತ್ತದೆ. ನಾಳೆ ತಪ್ಪದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದೆ.
ಇನ್ನು ಒಂದು ವೇಳೆ ಕಾರಣಾಂತರಗಳಿಂದ ನಾಳೆ ಶಾಲೆಗೆ ಹಾಜರಾಗದ ಮಕ್ಕಳಿಗೆ ಡಿಸೆಂಬರ್.16 ರಂದು ಮಾಪ್ ಅಪ್ ರೌಂಡ್ ನಡೆಸಲಾಗುತ್ತದೆ. ಮನೆ ಮನೆಗೆ ಭೇಟಿ ನೀಡಿ, ತಪ್ಪಿ ಹೋದ ಎಲ್ಲಾ ಮಕ್ಕಳಿಗೂ ಜಂತು ನಿವಾರಕ ಮಾತ್ರೆಯನ್ನು ಕೊಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…