ರಾಜ್ಯ

ಶಾಲೆಯಲ್ಲಿ ಮೊಟ್ಟೆ ಬಾಳೆಹಣ್ಣು ವಿತರಣೆ : ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ

ಬೆಂಗಳೂರು : ಮಕ್ಕಳಿಗೆ ಇನ್ನು ಮುಂದೆ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುತ್ತದೆ ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬಿಜೆಪಿ ಸದಸ್ಯ ರವಿಕುಮಾರ್ ಅವರು, ಬಾಳೆಹಣ್ಣು ಮತ್ತು ಮೊಟ್ಟೆ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವಾರದಲ್ಲಿ ಮೂರು ದಿನ ಮೊಟ್ಟೆ, ಮೂರು ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇನ್ನೂ ಕೆಲವು ಕಡೆ ಇದು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಇದಕ್ಕಾಗಿ ಅನುದಾನವನ್ನು ನೀಡುತ್ತಿದೆ. ಎಲ್ಲ ಭಾಗಗಳಲ್ಲಿ ಮೊಟ್ಟೆ, ಬಾಳೆಹಣ್ಣು ಹಾಗೂ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚು ದಿನ ಮೊಟ್ಟೆಯನ್ನು ಕೊಡಲಾಗುತ್ತದೆ. ಆದರೆ ಕೆಲವು ಕಡೆ ಇದು ತಾರತಮ್ಯ ನೀತಿಯಿಂದ ಕೂಡಿದೆ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವ ಮಧುಬಂಗಾರಪ್ಪ, ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಕಡೆ ಆಕ್ಷೇಪ ಕೇಳಿಬಂದಿವೆ. ಕೆಲವು ಕಡೆ ಪೋಷಕರು ನಮ ಮಕ್ಕಳು ಮೊಟ್ಟೆ ತಿನ್ನುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸುತ್ತಾರೆ.

ಹೀಗಾಗಿ ಮುಂದಿನ ದಿನಗಳಲ್ಲಿ ಶಾಲಾ ಪ್ರವೇಶವಾದ ತಕ್ಷಣವೇ ವಿದ್ಯಾರ್ಥಿಗಳ ಪೋಷಕರಿಂದ ಮೊಟ್ಟೆ ತಿನ್ನುವ ಇಲ್ಲವೇ ಬಾಳೆಹಣ್ಣು ತಿನ್ನುವ ಬಗ್ಗೆ ಅನುಮತಿ ಪತ್ರವನ್ನು ಪಡೆಯುತ್ತೇವೆ. ಕೆಲವು ಮಕ್ಕಳಿಗೆ ಮೊಟ್ಟೆ ತಿನ್ನುವುದಕ್ಕೆ ಪೋಷಕರಿಂದ ವಿರೋಧವಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago