ರಾಜ್ಯ

ಶಾಲೆಯಲ್ಲಿ ಮೊಟ್ಟೆ ಬಾಳೆಹಣ್ಣು ವಿತರಣೆ : ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ

ಬೆಂಗಳೂರು : ಮಕ್ಕಳಿಗೆ ಇನ್ನು ಮುಂದೆ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುತ್ತದೆ ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬಿಜೆಪಿ ಸದಸ್ಯ ರವಿಕುಮಾರ್ ಅವರು, ಬಾಳೆಹಣ್ಣು ಮತ್ತು ಮೊಟ್ಟೆ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವಾರದಲ್ಲಿ ಮೂರು ದಿನ ಮೊಟ್ಟೆ, ಮೂರು ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇನ್ನೂ ಕೆಲವು ಕಡೆ ಇದು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಇದಕ್ಕಾಗಿ ಅನುದಾನವನ್ನು ನೀಡುತ್ತಿದೆ. ಎಲ್ಲ ಭಾಗಗಳಲ್ಲಿ ಮೊಟ್ಟೆ, ಬಾಳೆಹಣ್ಣು ಹಾಗೂ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚು ದಿನ ಮೊಟ್ಟೆಯನ್ನು ಕೊಡಲಾಗುತ್ತದೆ. ಆದರೆ ಕೆಲವು ಕಡೆ ಇದು ತಾರತಮ್ಯ ನೀತಿಯಿಂದ ಕೂಡಿದೆ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವ ಮಧುಬಂಗಾರಪ್ಪ, ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಕಡೆ ಆಕ್ಷೇಪ ಕೇಳಿಬಂದಿವೆ. ಕೆಲವು ಕಡೆ ಪೋಷಕರು ನಮ ಮಕ್ಕಳು ಮೊಟ್ಟೆ ತಿನ್ನುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸುತ್ತಾರೆ.

ಹೀಗಾಗಿ ಮುಂದಿನ ದಿನಗಳಲ್ಲಿ ಶಾಲಾ ಪ್ರವೇಶವಾದ ತಕ್ಷಣವೇ ವಿದ್ಯಾರ್ಥಿಗಳ ಪೋಷಕರಿಂದ ಮೊಟ್ಟೆ ತಿನ್ನುವ ಇಲ್ಲವೇ ಬಾಳೆಹಣ್ಣು ತಿನ್ನುವ ಬಗ್ಗೆ ಅನುಮತಿ ಪತ್ರವನ್ನು ಪಡೆಯುತ್ತೇವೆ. ಕೆಲವು ಮಕ್ಕಳಿಗೆ ಮೊಟ್ಟೆ ತಿನ್ನುವುದಕ್ಕೆ ಪೋಷಕರಿಂದ ವಿರೋಧವಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago