ರಾಜ್ಯ

ಶಾಲೆಯಲ್ಲಿ ಮೊಟ್ಟೆ ಬಾಳೆಹಣ್ಣು ವಿತರಣೆ : ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ

ಬೆಂಗಳೂರು : ಮಕ್ಕಳಿಗೆ ಇನ್ನು ಮುಂದೆ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುತ್ತದೆ ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬಿಜೆಪಿ ಸದಸ್ಯ ರವಿಕುಮಾರ್ ಅವರು, ಬಾಳೆಹಣ್ಣು ಮತ್ತು ಮೊಟ್ಟೆ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವಾರದಲ್ಲಿ ಮೂರು ದಿನ ಮೊಟ್ಟೆ, ಮೂರು ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇನ್ನೂ ಕೆಲವು ಕಡೆ ಇದು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಇದಕ್ಕಾಗಿ ಅನುದಾನವನ್ನು ನೀಡುತ್ತಿದೆ. ಎಲ್ಲ ಭಾಗಗಳಲ್ಲಿ ಮೊಟ್ಟೆ, ಬಾಳೆಹಣ್ಣು ಹಾಗೂ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚು ದಿನ ಮೊಟ್ಟೆಯನ್ನು ಕೊಡಲಾಗುತ್ತದೆ. ಆದರೆ ಕೆಲವು ಕಡೆ ಇದು ತಾರತಮ್ಯ ನೀತಿಯಿಂದ ಕೂಡಿದೆ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವ ಮಧುಬಂಗಾರಪ್ಪ, ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಕಡೆ ಆಕ್ಷೇಪ ಕೇಳಿಬಂದಿವೆ. ಕೆಲವು ಕಡೆ ಪೋಷಕರು ನಮ ಮಕ್ಕಳು ಮೊಟ್ಟೆ ತಿನ್ನುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸುತ್ತಾರೆ.

ಹೀಗಾಗಿ ಮುಂದಿನ ದಿನಗಳಲ್ಲಿ ಶಾಲಾ ಪ್ರವೇಶವಾದ ತಕ್ಷಣವೇ ವಿದ್ಯಾರ್ಥಿಗಳ ಪೋಷಕರಿಂದ ಮೊಟ್ಟೆ ತಿನ್ನುವ ಇಲ್ಲವೇ ಬಾಳೆಹಣ್ಣು ತಿನ್ನುವ ಬಗ್ಗೆ ಅನುಮತಿ ಪತ್ರವನ್ನು ಪಡೆಯುತ್ತೇವೆ. ಕೆಲವು ಮಕ್ಕಳಿಗೆ ಮೊಟ್ಟೆ ತಿನ್ನುವುದಕ್ಕೆ ಪೋಷಕರಿಂದ ವಿರೋಧವಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

5 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

6 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

7 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

10 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

11 hours ago