ರಾಜ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದರು.‌

ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.‌

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದರು.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಓದಿ ವಿವರಿಸಿ,
ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದರು. ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

“ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ” ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago