Kಃ Muniyappa kharge
ಮೈಸೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮಳಿಗೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈಗಾಗಲೇ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಅದರಲ್ಲಿ 5ಕೆಜಿ ಅಕ್ಕಿಯ ಬದಲು ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳಿನಿಂದ ಈ ಯೋಜನೆ ಜಾರಿಗೊಳ್ಳಲಿದೆ. ಕಾರ್ಡ್ ದಾರರ ಬೇಡಿಕೆಗೆ ಅನುಗುಣವಾಗಿ ಅಕ್ಕಿಯ ಬದಲು ಪೌಷ್ಟಿಕಾಂಶಯುಕ್ತ ಬೆಳೆ ಕಾಳು ಹಾಗೂ ಎಣ್ಣೆ ವಿತರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ 4ಕೋಟಿ 50 ಲಕ್ಷ ಪಲಾನುಭವಿಗಳಿದ್ದಾರೆ ಎಲ್ಲರಿಗೂ ಈ ಯೋಜನೆ ಅನುಷ್ಠಾನವಾಗಲಿದೆ. ಈಗಾಗಲೇ ಪಲಾನುಭವಿಗಳು ತೆರಿಗೆದಾರಾರಾಗಿದ್ದರೆ ಹಾಗೂ 7ಎಕರೆಗೂ ಹೆಚ್ಚು ಜಮೀನು ಹೊಂದಿದ್ದರೆ ಅಂತವರ ಕಾರ್ಡ್ ಗಳು ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಹಿಸಲಾಗುವುದು, ಈ ಪ್ರಕ್ರಿಯೆ ನಡೆಸಲಾಗುತ್ತದೆ, ಒಂದು ವೇಳೆ ಲೋಪದೋಷ ಕಂಡುಬಂದಲ್ಲಿ ಸ್ಥಳೀಯ ತಹಶೀಲ್ದಾರ್ ರನ್ನು ಭೇಟಿಯಾಗಿ ಸರಿಪಡಿಸಿಕೊಳ್ಳಬಹುದು ಎಂದರು.
ಇದನ್ನು ಓದಿ: ಬಿಪಿಎಲ್ ಕಾರ್ಡ್ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ
ಇದೆ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗಾಗಿ ತಂದಿರುವ ಅನ್ನಭಾಗ್ಯ ಯೋಜನೆಯು ಸಮರ್ಪಕವಾಗಿ ಆಹಾರ ಇಲಾಖೆ ಪೂರೈಕೆ ಮಾಡುತ್ತಿದೆ, ಇಲಾಖೆಯ ನಿರ್ಧಾರದಂತೆ ಎಣ್ಣೆ ಕಾಳುಗಳನ್ನು ವಿತರಿಸಲು ಮುಂದಾಗಿರುವುದು ಸ್ವಾಗತಾರ್ಹ, ಪಲಾನುಭವಿಗಳಿಗೆ ತಲುಪಿಸುವುದೇ ಸರ್ಕಾರದ ಮೂಲ ಉದ್ದೇಶವಾಗಿದೆ, ಆಹಾರ ವಿತರಣೆಯ ವೇಳೆಯಲ್ಲಿ ಕಾರ್ಡ್ ದಾರಾರಿಂದ ಹಣ ಪಡೆಯುತ್ತಿದ್ದರೆ ಅವುಗಳನ್ನು ಸರಿಪಡಿಸಲಾಗುವುದು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈ ಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ, ಹಲವಾರು ಹಿರಿಯ ಶಾಸಕರು ಸಚಿವರಾಗಲು ಬಯಸುತ್ತಿರುವುದು ಸಹಜ ಎಂದು ತಿಳಿಸಿದರು.
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…