ರಾಜ್ಯ

ಬಿಪಿಎಲ್‌ ಕಾರ್ಡ್‌ದಾರರಿಗೆ ಎಣ್ಣೆ, ಬೆಳೆಕಾಳು ವಿತರಣೆ ; ಆಹಾರ ಸಚಿವ ಮುನಿಯಪ್ಪ

ಮೈಸೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮಳಿಗೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈಗಾಗಲೇ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಅದರಲ್ಲಿ 5ಕೆಜಿ ಅಕ್ಕಿಯ ಬದಲು ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳಿನಿಂದ ಈ ಯೋಜನೆ ಜಾರಿಗೊಳ್ಳಲಿದೆ. ಕಾರ್ಡ್ ದಾರರ ಬೇಡಿಕೆಗೆ ಅನುಗುಣವಾಗಿ ಅಕ್ಕಿಯ ಬದಲು ಪೌಷ್ಟಿಕಾಂಶಯುಕ್ತ ಬೆಳೆ ಕಾಳು ಹಾಗೂ ಎಣ್ಣೆ ವಿತರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 4ಕೋಟಿ 50 ಲಕ್ಷ ಪಲಾನುಭವಿಗಳಿದ್ದಾರೆ ಎಲ್ಲರಿಗೂ ಈ ಯೋಜನೆ ಅನುಷ್ಠಾನವಾಗಲಿದೆ. ಈಗಾಗಲೇ ಪಲಾನುಭವಿಗಳು ತೆರಿಗೆದಾರಾರಾಗಿದ್ದರೆ ಹಾಗೂ 7ಎಕರೆಗೂ ಹೆಚ್ಚು ಜಮೀನು ಹೊಂದಿದ್ದರೆ ಅಂತವರ ಕಾರ್ಡ್ ಗಳು ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಹಿಸಲಾಗುವುದು, ಈ ಪ್ರಕ್ರಿಯೆ ನಡೆಸಲಾಗುತ್ತದೆ, ಒಂದು ವೇಳೆ ಲೋಪದೋಷ ಕಂಡುಬಂದಲ್ಲಿ ಸ್ಥಳೀಯ ತಹಶೀಲ್ದಾರ್ ರನ್ನು ಭೇಟಿಯಾಗಿ ಸರಿಪಡಿಸಿಕೊಳ್ಳಬಹುದು ಎಂದರು.

ಇದನ್ನು ಓದಿ: ಬಿಪಿಎಲ್‌ ಕಾರ್ಡ್‌ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ

ಇದೆ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗಾಗಿ ತಂದಿರುವ ಅನ್ನಭಾಗ್ಯ ಯೋಜನೆಯು ಸಮರ್ಪಕವಾಗಿ ಆಹಾರ ಇಲಾಖೆ ಪೂರೈಕೆ ಮಾಡುತ್ತಿದೆ, ಇಲಾಖೆಯ ನಿರ್ಧಾರದಂತೆ ಎಣ್ಣೆ ಕಾಳುಗಳನ್ನು ವಿತರಿಸಲು ಮುಂದಾಗಿರುವುದು ಸ್ವಾಗತಾರ್ಹ, ಪಲಾನುಭವಿಗಳಿಗೆ ತಲುಪಿಸುವುದೇ ಸರ್ಕಾರದ ಮೂಲ ಉದ್ದೇಶವಾಗಿದೆ, ಆಹಾರ ವಿತರಣೆಯ ವೇಳೆಯಲ್ಲಿ ಕಾರ್ಡ್ ದಾರಾರಿಂದ ಹಣ ಪಡೆಯುತ್ತಿದ್ದರೆ ಅವುಗಳನ್ನು ಸರಿಪಡಿಸಲಾಗುವುದು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈ ಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ, ಹಲವಾರು ಹಿರಿಯ ಶಾಸಕರು ಸಚಿವರಾಗಲು ಬಯಸುತ್ತಿರುವುದು ಸಹಜ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

12 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

13 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

15 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

15 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

18 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

19 hours ago