ರಾಜ್ಯ

ಬಿಪಿಎಲ್‌ ಕಾರ್ಡ್‌ದಾರರಿಗೆ ಎಣ್ಣೆ, ಬೆಳೆಕಾಳು ವಿತರಣೆ ; ಆಹಾರ ಸಚಿವ ಮುನಿಯಪ್ಪ

ಮೈಸೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮಳಿಗೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈಗಾಗಲೇ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಅದರಲ್ಲಿ 5ಕೆಜಿ ಅಕ್ಕಿಯ ಬದಲು ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳಿನಿಂದ ಈ ಯೋಜನೆ ಜಾರಿಗೊಳ್ಳಲಿದೆ. ಕಾರ್ಡ್ ದಾರರ ಬೇಡಿಕೆಗೆ ಅನುಗುಣವಾಗಿ ಅಕ್ಕಿಯ ಬದಲು ಪೌಷ್ಟಿಕಾಂಶಯುಕ್ತ ಬೆಳೆ ಕಾಳು ಹಾಗೂ ಎಣ್ಣೆ ವಿತರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 4ಕೋಟಿ 50 ಲಕ್ಷ ಪಲಾನುಭವಿಗಳಿದ್ದಾರೆ ಎಲ್ಲರಿಗೂ ಈ ಯೋಜನೆ ಅನುಷ್ಠಾನವಾಗಲಿದೆ. ಈಗಾಗಲೇ ಪಲಾನುಭವಿಗಳು ತೆರಿಗೆದಾರಾರಾಗಿದ್ದರೆ ಹಾಗೂ 7ಎಕರೆಗೂ ಹೆಚ್ಚು ಜಮೀನು ಹೊಂದಿದ್ದರೆ ಅಂತವರ ಕಾರ್ಡ್ ಗಳು ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಹಿಸಲಾಗುವುದು, ಈ ಪ್ರಕ್ರಿಯೆ ನಡೆಸಲಾಗುತ್ತದೆ, ಒಂದು ವೇಳೆ ಲೋಪದೋಷ ಕಂಡುಬಂದಲ್ಲಿ ಸ್ಥಳೀಯ ತಹಶೀಲ್ದಾರ್ ರನ್ನು ಭೇಟಿಯಾಗಿ ಸರಿಪಡಿಸಿಕೊಳ್ಳಬಹುದು ಎಂದರು.

ಇದನ್ನು ಓದಿ: ಬಿಪಿಎಲ್‌ ಕಾರ್ಡ್‌ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ

ಇದೆ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗಾಗಿ ತಂದಿರುವ ಅನ್ನಭಾಗ್ಯ ಯೋಜನೆಯು ಸಮರ್ಪಕವಾಗಿ ಆಹಾರ ಇಲಾಖೆ ಪೂರೈಕೆ ಮಾಡುತ್ತಿದೆ, ಇಲಾಖೆಯ ನಿರ್ಧಾರದಂತೆ ಎಣ್ಣೆ ಕಾಳುಗಳನ್ನು ವಿತರಿಸಲು ಮುಂದಾಗಿರುವುದು ಸ್ವಾಗತಾರ್ಹ, ಪಲಾನುಭವಿಗಳಿಗೆ ತಲುಪಿಸುವುದೇ ಸರ್ಕಾರದ ಮೂಲ ಉದ್ದೇಶವಾಗಿದೆ, ಆಹಾರ ವಿತರಣೆಯ ವೇಳೆಯಲ್ಲಿ ಕಾರ್ಡ್ ದಾರಾರಿಂದ ಹಣ ಪಡೆಯುತ್ತಿದ್ದರೆ ಅವುಗಳನ್ನು ಸರಿಪಡಿಸಲಾಗುವುದು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈ ಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ, ಹಲವಾರು ಹಿರಿಯ ಶಾಸಕರು ಸಚಿವರಾಗಲು ಬಯಸುತ್ತಿರುವುದು ಸಹಜ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

5 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

6 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

6 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

12 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

12 hours ago