ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.
ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.
ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…