ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.
ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.
ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…