ರಾಜ್ಯ

ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ: ಕೆ.ವಿ.ಪ್ರಭಾಕರ್

ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.

ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago