ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.
ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.
ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…