ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಪಕ್ಷದ ಭಾರತ್ ಜೋಡು ಭವನದಲ್ಲಿ ಇಂದು ನಡೆದ ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ ಹೀಗಾಗಿ ಮೀಸಲಾತಿ ಹಾಗೂ ನ್ಯಾಯಾಲಯದಲ್ಲಿರುವ ಅರ್ಜಿÀಗಳನ್ನು ಎರಡು ಮೂರು ತಿಂಗಳ ಒಳಗಾಗಿ ಇತ್ಯಾರ್ಥ ಪಡಿಸಿ ಇತ್ಯರ್ಥಪಡಿಸಿ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆ ನೀಡಿದ್ದಾರೆ. ಅದೇ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ 5 ಪಾಲಿಕೆಗಳ 369 ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ ಎಂದು ಹೇಳಿದರು .
ಮೀಸಲಾತಿ ನಿಗದಿಯಾದ ಬಳಿಕ ಚುನಾವಣೆಯ ಫಾರಂ ಗಾಗಿ ಪಕ್ಷಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಯಾರು ಕಾಯುತ್ತಾ ಕುಳಿತುಕೊಳ್ಳುವಂತಿಲ್ಲ. ಇಂದಿನಿಂದಲೇ ಅರ್ಜಿ ಸ್ವೀಕಾರ ಆರಂಭವಾಗಲಿದ್ದು ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ. ಸಾಮಾನ್ಯ ವರ್ಗದವರು 50,000 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 25,000 ಪಾವತಿಸಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಕಟ್ಟಡ ವಂತಿಕೆಯನ್ನು ಸ್ವೀಕರಿಸಲಾಗುತ್ತಿರುವ ಹಣವನ್ನು ಪಕ್ಷದ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುವುದು. ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕಚೇರಿಗೆ 70,000 ಜಿಲ್ಲಾ ಮಟ್ಟದ ಕಚೇರಿಗೆ 20 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪಕ್ಷಕ್ಕೆ ನೂರು ಕಚೇರಿಗಳನ್ನು ನಿರ್ಮಿಸುವ ಗುರಿಗೆ ಈಗಾಗಲೇ 70 ಕಚೇರಿಗಳನ್ನು ಸ್ಥಳ ಗುರುತಿಸಲಾಗಿದೆ ಎಂದು ಅವರು ಎಂದು ತಿಳಿಸಿದರು.
ಕಳೆದ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ ಎರಡು ಲಕ್ಷದಂತೆ 20 ಕೋಟಿ ಸಂಗ್ರಹಿಸಿ ಅದರಲ್ಲಿ ಭಾರತ ಜೋಡು ಭವನವನ್ನು ಪೂರ್ಣಗೊಳಿಸಲಾಯಿತು .ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಪರ್ಧಾಕಾಂಕ್ಷಿಗಳು ನನಗೆ ಹಣ ನೀಡಬೇಡಿ. ಕಟ್ಟಡ ನಿರ್ಮಾಣಕ್ಕೆ ಕೊಡಿ. ಈ ಸಂದರ್ಭದಲ್ಲಿ ಮಹಿಳೆಯರ ಮಹಿಳಾ ಕಾರ್ಯಕರ್ತರಿಂದ ತಮಗೆ ಅರ್ಜಿ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇಡಬೇಕು ಎಂಬ ಬೇಡಿಕೆ ಬಂದಾಗ ಅದೆಲ್ಲ ಸಾಧ್ಯ ಇಲ್ಲ ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ಇಷ್ಟ ಇದ್ದರೆ ಅರ್ಜಿ ಹಾಕಿ ಇಲ್ಲದಿದ್ದರೆ ಹಾಕಲೇಬೇಡಿ ಎಂದು ನಿಷ್ಟುರವಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಓಬಿಸಿ ವರ್ಗಕ್ಕೂ ಶುಲ್ಕ ರಿಯಾಯಿತಿ ನೀಡಬೇಕು ಎಂದು ಕೆಲವರು ಮನವಿ ಮಾಡಿದಾಗ ಏ ಸುಮ್ಮನಿರಪ್ಪ ಯಾವ ಒಬಿಸೀನು ಇಲ್ಲ ನಾನು ಒಬಿಸಿನೇ. ಒಕ್ಕಲಿಗರು ಲಿಂಗಾಯಿತರು ಆದಾಯ ಇಲ್ಲದ ಬ್ರಾಹ್ಮಣರು ಕೂಡ ಒಬಿಸಿಗಳೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಜೆ ಜಾರ್ಜ್ ಮಧ್ಯಪ್ರವೇಶಿಸಿದ್ದರಿಂದಾಗಿ ಮಹಿಳೆಯರ ಅರ್ಜಿ ಶುಲ್ಕವನ್ನು 25,000ಗಳಿಗೆ ಕಡಿತ ಮಾಡುವುದಾಗಿ ಘೋಷಿಸಿದರು.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…