ರಾಜ್ಯ

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಪಕ್ಷದ ಭಾರತ್ ಜೋಡು ಭವನದಲ್ಲಿ ಇಂದು ನಡೆದ ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ ಹೀಗಾಗಿ ಮೀಸಲಾತಿ ಹಾಗೂ ನ್ಯಾಯಾಲಯದಲ್ಲಿರುವ ಅರ್ಜಿÀಗಳನ್ನು ಎರಡು ಮೂರು ತಿಂಗಳ ಒಳಗಾಗಿ ಇತ್ಯಾರ್ಥ ಪಡಿಸಿ ಇತ್ಯರ್ಥಪಡಿಸಿ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆ ನೀಡಿದ್ದಾರೆ. ಅದೇ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ 5 ಪಾಲಿಕೆಗಳ 369 ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ ಎಂದು ಹೇಳಿದರು .

ಮೀಸಲಾತಿ ನಿಗದಿಯಾದ ಬಳಿಕ ಚುನಾವಣೆಯ ಫಾರಂ ಗಾಗಿ ಪಕ್ಷಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಯಾರು ಕಾಯುತ್ತಾ ಕುಳಿತುಕೊಳ್ಳುವಂತಿಲ್ಲ. ಇಂದಿನಿಂದಲೇ ಅರ್ಜಿ ಸ್ವೀಕಾರ ಆರಂಭವಾಗಲಿದ್ದು ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ. ಸಾಮಾನ್ಯ ವರ್ಗದವರು 50,000 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 25,000 ಪಾವತಿಸಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಕಟ್ಟಡ ವಂತಿಕೆಯನ್ನು ಸ್ವೀಕರಿಸಲಾಗುತ್ತಿರುವ ಹಣವನ್ನು ಪಕ್ಷದ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುವುದು. ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕಚೇರಿಗೆ 70,000 ಜಿಲ್ಲಾ ಮಟ್ಟದ ಕಚೇರಿಗೆ 20 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪಕ್ಷಕ್ಕೆ ನೂರು ಕಚೇರಿಗಳನ್ನು ನಿರ್ಮಿಸುವ ಗುರಿಗೆ ಈಗಾಗಲೇ 70 ಕಚೇರಿಗಳನ್ನು ಸ್ಥಳ ಗುರುತಿಸಲಾಗಿದೆ ಎಂದು ಅವರು ಎಂದು ತಿಳಿಸಿದರು.

ಕಳೆದ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ ಎರಡು ಲಕ್ಷದಂತೆ 20 ಕೋಟಿ ಸಂಗ್ರಹಿಸಿ ಅದರಲ್ಲಿ ಭಾರತ ಜೋಡು ಭವನವನ್ನು ಪೂರ್ಣಗೊಳಿಸಲಾಯಿತು .ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಪರ್ಧಾಕಾಂಕ್ಷಿಗಳು ನನಗೆ ಹಣ ನೀಡಬೇಡಿ. ಕಟ್ಟಡ ನಿರ್ಮಾಣಕ್ಕೆ ಕೊಡಿ. ಈ ಸಂದರ್ಭದಲ್ಲಿ ಮಹಿಳೆಯರ ಮಹಿಳಾ ಕಾರ್ಯಕರ್ತರಿಂದ ತಮಗೆ ಅರ್ಜಿ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇಡಬೇಕು ಎಂಬ ಬೇಡಿಕೆ ಬಂದಾಗ ಅದೆಲ್ಲ ಸಾಧ್ಯ ಇಲ್ಲ ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ಇಷ್ಟ ಇದ್ದರೆ ಅರ್ಜಿ ಹಾಕಿ ಇಲ್ಲದಿದ್ದರೆ ಹಾಕಲೇಬೇಡಿ ಎಂದು ನಿಷ್ಟುರವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಓಬಿಸಿ ವರ್ಗಕ್ಕೂ ಶುಲ್ಕ ರಿಯಾಯಿತಿ ನೀಡಬೇಕು ಎಂದು ಕೆಲವರು ಮನವಿ ಮಾಡಿದಾಗ ಏ ಸುಮ್ಮನಿರಪ್ಪ ಯಾವ ಒಬಿಸೀನು ಇಲ್ಲ ನಾನು ಒಬಿಸಿನೇ. ಒಕ್ಕಲಿಗರು ಲಿಂಗಾಯಿತರು ಆದಾಯ ಇಲ್ಲದ ಬ್ರಾಹ್ಮಣರು ಕೂಡ ಒಬಿಸಿಗಳೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಜೆ ಜಾರ್ಜ್ ಮಧ್ಯಪ್ರವೇಶಿಸಿದ್ದರಿಂದಾಗಿ ಮಹಿಳೆಯರ ಅರ್ಜಿ ಶುಲ್ಕವನ್ನು 25,000ಗಳಿಗೆ ಕಡಿತ ಮಾಡುವುದಾಗಿ ಘೋಷಿಸಿದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

1 min ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

46 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago