ರಾಜ್ಯ

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಪಕ್ಷದ ಭಾರತ್ ಜೋಡು ಭವನದಲ್ಲಿ ಇಂದು ನಡೆದ ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ ಹೀಗಾಗಿ ಮೀಸಲಾತಿ ಹಾಗೂ ನ್ಯಾಯಾಲಯದಲ್ಲಿರುವ ಅರ್ಜಿÀಗಳನ್ನು ಎರಡು ಮೂರು ತಿಂಗಳ ಒಳಗಾಗಿ ಇತ್ಯಾರ್ಥ ಪಡಿಸಿ ಇತ್ಯರ್ಥಪಡಿಸಿ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆ ನೀಡಿದ್ದಾರೆ. ಅದೇ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ 5 ಪಾಲಿಕೆಗಳ 369 ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ ಎಂದು ಹೇಳಿದರು .

ಮೀಸಲಾತಿ ನಿಗದಿಯಾದ ಬಳಿಕ ಚುನಾವಣೆಯ ಫಾರಂ ಗಾಗಿ ಪಕ್ಷಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಯಾರು ಕಾಯುತ್ತಾ ಕುಳಿತುಕೊಳ್ಳುವಂತಿಲ್ಲ. ಇಂದಿನಿಂದಲೇ ಅರ್ಜಿ ಸ್ವೀಕಾರ ಆರಂಭವಾಗಲಿದ್ದು ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ. ಸಾಮಾನ್ಯ ವರ್ಗದವರು 50,000 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 25,000 ಪಾವತಿಸಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಕಟ್ಟಡ ವಂತಿಕೆಯನ್ನು ಸ್ವೀಕರಿಸಲಾಗುತ್ತಿರುವ ಹಣವನ್ನು ಪಕ್ಷದ ಕಟ್ಟಡ ನಿರ್ಮಾಣಕ್ಕೆ ಬಳಸಲಾಗುವುದು. ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕಚೇರಿಗೆ 70,000 ಜಿಲ್ಲಾ ಮಟ್ಟದ ಕಚೇರಿಗೆ 20 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪಕ್ಷಕ್ಕೆ ನೂರು ಕಚೇರಿಗಳನ್ನು ನಿರ್ಮಿಸುವ ಗುರಿಗೆ ಈಗಾಗಲೇ 70 ಕಚೇರಿಗಳನ್ನು ಸ್ಥಳ ಗುರುತಿಸಲಾಗಿದೆ ಎಂದು ಅವರು ಎಂದು ತಿಳಿಸಿದರು.

ಕಳೆದ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ ಎರಡು ಲಕ್ಷದಂತೆ 20 ಕೋಟಿ ಸಂಗ್ರಹಿಸಿ ಅದರಲ್ಲಿ ಭಾರತ ಜೋಡು ಭವನವನ್ನು ಪೂರ್ಣಗೊಳಿಸಲಾಯಿತು .ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಪರ್ಧಾಕಾಂಕ್ಷಿಗಳು ನನಗೆ ಹಣ ನೀಡಬೇಡಿ. ಕಟ್ಟಡ ನಿರ್ಮಾಣಕ್ಕೆ ಕೊಡಿ. ಈ ಸಂದರ್ಭದಲ್ಲಿ ಮಹಿಳೆಯರ ಮಹಿಳಾ ಕಾರ್ಯಕರ್ತರಿಂದ ತಮಗೆ ಅರ್ಜಿ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇಡಬೇಕು ಎಂಬ ಬೇಡಿಕೆ ಬಂದಾಗ ಅದೆಲ್ಲ ಸಾಧ್ಯ ಇಲ್ಲ ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ಇಷ್ಟ ಇದ್ದರೆ ಅರ್ಜಿ ಹಾಕಿ ಇಲ್ಲದಿದ್ದರೆ ಹಾಕಲೇಬೇಡಿ ಎಂದು ನಿಷ್ಟುರವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಓಬಿಸಿ ವರ್ಗಕ್ಕೂ ಶುಲ್ಕ ರಿಯಾಯಿತಿ ನೀಡಬೇಕು ಎಂದು ಕೆಲವರು ಮನವಿ ಮಾಡಿದಾಗ ಏ ಸುಮ್ಮನಿರಪ್ಪ ಯಾವ ಒಬಿಸೀನು ಇಲ್ಲ ನಾನು ಒಬಿಸಿನೇ. ಒಕ್ಕಲಿಗರು ಲಿಂಗಾಯಿತರು ಆದಾಯ ಇಲ್ಲದ ಬ್ರಾಹ್ಮಣರು ಕೂಡ ಒಬಿಸಿಗಳೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಜೆ ಜಾರ್ಜ್ ಮಧ್ಯಪ್ರವೇಶಿಸಿದ್ದರಿಂದಾಗಿ ಮಹಿಳೆಯರ ಅರ್ಜಿ ಶುಲ್ಕವನ್ನು 25,000ಗಳಿಗೆ ಕಡಿತ ಮಾಡುವುದಾಗಿ ಘೋಷಿಸಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago