ರಾಜ್ಯ

ದೀಪಾವಳಿ: KSRTCಯಿಂದ 2000 ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುಮಾರು 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಅಕ್ಟೋಬರ್‌ 31 ರಂದು ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್‌ 2 ರಂದು ಬಲಿಪಾಡ್ಯಮಿ(ದೀಪಾವಳಿ) ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 31 ರಿಂದ ನವೆಂಬರ್‌ 2 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ. ಜೊತೆಗೆ ನವೆಂಬರ್‌ 3 ಮತ್ತು 4 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಸೇವೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಿಂದ;ಎಲ್ಲಿಗೆ?
ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಹಣ್ಮ, ಶಿವಮೊಗ್ಗ, ಹಾಸನ,ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ಮೈಸೂರು,ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಹಾಗೂ ಹೊರರಾಜ್ಯಗಳಾದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್‌, ತಿರುಚ್ಚಿ, ಪಾಲಕ್ಕಡ್‌, ತ್ರಿಶೂರ್‌, ಎನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್‌ ನಿಲ್ದಾಣ, ಪಿಕ್‌ಅಪ್‌ ಪಾಯಿಂಟ್‌ ಮಾಹಿತಿಯನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

ಟಿಕೆಟ್‌ ಬುಕ್ಕಿಂಗ್‌ ಹೇಗೆ?
www.ksrtc.karnataka.gov.in  ವೆಬ್‌ಸೈಟ್‌ ಮೂಲಕ ಇ-ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಒಬ್ಬರು ನಾಲ್ಕಕ್ಕಿಂತ ಹೆಚ್ಚು ಟಿಕೆಟ್‌ ಬುಕ್ಕಿಂಗ್‌ ಮಾಡಿದರೆ ಶೇ5ರಷ್ಟು ರಿಯಾಯಿತಿ ಸಿಗಲಿದೆ. ಜೊತೆಗೆ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

47 mins ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

1 hour ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

2 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

2 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

2 hours ago