by vijayendra
ಬೆಂಗಳೂರು: ಒಂದು ವೇಳೆ ಸಾಧ್ಯವಾದರೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನಾದರೂ ನಿಲ್ಲಿಸಬಹುದು. ಕಾಂಗ್ರೆಸ್ ನಡುವೆ ನಡೆಯುತ್ತಿರುವ ಆಂತರಿಕ ಕಲಹವನ್ನು ಯಾವುದೇ ಕಾರಣಕ್ಕೂ ತಡೆಯಲು ಸಾಧ್ಯವಿಲ್ಲ. ದೀಪಾವಳಿ ಧಮಾಕಾ ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ – ಡಿಸಿಎಂ ಮಧ್ಯೆ ಬಹಳಷ್ಟು ವ್ಯತ್ಯಾಸಗಳಿವೆ. ಒಂದು ವೇಳೆ ರಷ್ಯಾ ಉಕ್ರೇನ್ ಯುದ್ಧ ನಿಲ್ಲಬಹುದು. ಆದರೆ ಕಾಂಗ್ರೆಸ್ ಒಳಗಿನ ಅಂತರ್ ಯುದ್ಧ ನಿಲ್ಲುವುದಿಲ್ಲ. ಕಾಂಗ್ರೆಸ್ನಲ್ಲಿ ದೀಪಾವಳಿ ಧಮಾಕಾ ಪಕ್ಕಾ ಎಂದಿದ್ದಾರೆ.
ಕಾಂಗ್ರೆಸ್ ಮೂರ್ಖರ ಪಕ್ಷ. ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸುವುದು ಮೂರ್ಖತನದ ಪರಮಾವಧಿ. ದಾಖಲೆ ಇದ್ದರೆ ನ್ಯಾಯಾಲಯಕ್ಕೆ ಕೊಡಲಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ನ ಈ ರೀತಿ ಹುಚ್ಚಾಟ, ರಂಪಾಟ ಅಪಾಯಕಾರಿ ಬೆಳವಣಿಗೆ. ದೇಶದ ಜನರಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಅನುಮಾನ ಮೂಡಿಸುವುದು ಅಕ್ಷಮ್ಯವಾಗಿದೆ ಎಂದು ಹೇಳಿದರು.
ನಮಗೆ ರ್ಯಾಲಿ ಅಥವಾ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ ಎಂದರೆ ಹೈಕೋರ್ಟ್ ಆದೇಶ ತೋರಿಸುತ್ತಾರೆ. ಪೊಲೀಸರ ಈ ಕಾನೂನು ಕಾಂಗ್ರೆಸ್ಗೂ ಅನ್ವಯ ಆಗಬೇಕು ಎಂದು ಪ್ರಶ್ನೆ ಮಾಡಿದರು. ನಮಗೊಂದು ಅವರಿಗೊಂದು ಕಾನೂನು ಇಲ್ಲ. ಅವರ ರ್ಯಾಲಿಗೆ ಅವಕಾಶ ಕೊಟ್ಟರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ನೋಡೋಣ ಏನ್ ಮಾಡಬೇಕೆಂದು ಚರ್ಚೆ ಮಾಡುವುದಾಗಿ ಹೇಳಿದರು.
ರಾಹುಲ್ ಗಾಂಧಿ ಬರುವುದೇ ಅನುಮಾನ ಎಂದಿದ್ದಾರೆ. ಮೊದಲು ಅವರು ಬರಲಿ. ನಂತರ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಮುಖಂಡರು ಆ.4ರಂದು ಅದೇನು ಕಡಿದು ಕಟ್ಟೆ ಹಾಕುತ್ತಾರೆಂದು ನಾವೂ ನೋಡುತ್ತೇವೆ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಶಾಸಕರ ಹಾಗೂ ಸಚಿವರ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡದಿರುವುದರ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇದರಿಂದಲೇ ಸಾಬೀತಾಗಿದೆ ಎಂದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…