ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ2 % ರಷ್ಟು ತುಟ್ಟಿಭತ್ಯೆ( DA) ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ.
ಬುಧವಾರ ಸಂಜೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ 2025 ಜುಲೈ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಶೇ2:,ರಷ್ಟು ತುಟ್ಟಿ ಬತ್ತೆ ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ಮೂಲ ವೇತನ ಶೇಕಡ 12. 25 25 ರಿಂದ ಶೇಕಡ 14. 25ಕ್ಕೆ ಏರಿಕೆ ಮಾಡಲಾಗಿದೆ.
ಸರ್ಕಾರದ ಈ ಆದೇಶದಿಂದ ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ಇದು ಅನ್ವಯವಾಗಲಿದೆ. ಕಳೆದ ವರ್ಷ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಜಾರಿ ಮಾಡಲಾಗಿತ್ತು. ಸದ್ಯ ಈ ವರ್ಷ ಶೇಕಡಾ 1.50 ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿತ್ತು. ಹಾಲಿ ಜಾರಿಯಲ್ಲಿದ್ದ ಶೇಕಡಾ 10.75 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 12.25 ರಷ್ಟಕ್ಕೆ ಏರಿಕೆ ಮಾಡಲಾಗಿತ್ತು.
ಇದನ್ನೂ ಓದಿ:-ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್ ಮೇಲೆ ಪಾಕ್ ವೈಮಾನಿಕ ದಾಳಿ, ಸಾವಿನ ಶಂಕೆ
ಈ ಹಿಂದೆ ನವೆಂಬರ್ನಲ್ಲಿ ತುಟ್ಟಿಭತ್ಯೆಯನ್ನು ಕರ್ನಾಟಕ ಸರ್ಕಾರಿ ಏರಿಸಿತ್ತು. ಮೂಲವೇತನದ ಶೇ 8.50ರಷ್ಟು ತುಟ್ಟಿ ಭತ್ಯೆಯನ್ನು ಆರ್ಥಿಕ ಇಲಾಖೆಯ ಆದೇಶದ ಬಳಿಕ ಅದನ್ನು ಶೇ 10.75ಕ್ಕೆ ಹೆಚ್ಚಿಸಲಾಗಿತ್ತು. ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ ನೌಕರರಿಗೆ ಇದರ ಉಪಯೋಗ ದೊರೆತಿತ್ತು.
ಏನಿದು ತುಟ್ಟಿ ಭತ್ಯೆ?
ತುಟ್ಟಿ ಭತ್ಯೆ (DA) ಎಂಬುದು ಸರ್ಕಾರವು ಸಾರ್ವಜನಿಕ ವಲಯದ ಹಾಲಿ ಮತ್ತು ನಿವೃತ್ತ ಸದಸ್ಯರಿಗೆ ಒದಗಿಸುವ ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದೆ. ಸರ್ಕಾರಿ ನೌಕರರ ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಡಿಎ ಜೀವನ ವೆಚ್ಚಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ, ಡಿಎ ಅಂಶವು ವಿಭಿನ್ನ ಉದ್ಯೋಗಿಗಳಿಗೆ ಅವರ ಸ್ಥಳವನ್ನು ಆಧರಿಸಿ ವಿಭಿನ್ನವಾಗಿರುತ್ತದೆ. ಇದರರ್ಥ ನಗರ ವಲಯ, ಅರೆ-ನಗರ ವಲಯ ಅಥವಾ ಗ್ರಾಮೀಣ ವಲಯದ ಉದ್ಯೋಗಿಗಳಿಗೆ ಡಿಎ ವಿಭಿನ್ನವಾಗಿರುತ್ತದೆ. ಕಾಲಕಾಲಕ್ಕೆ ಇದನ್ನು ಪರಿಷ್ಕರಣೆ ಮಾಡಲಾಗುತ್ತದೆ. ಕರ್ನಾಟಕದಲ್ಲೂ ಈ ಪರಿಷ್ಕರಣೆ ಈಗ ಮಾಡಲಾಗಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…