ರಾಜ್ಯ

ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್‌ : ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ2 % ರಷ್ಟು ತುಟ್ಟಿಭತ್ಯೆ( DA) ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ.

ಬುಧವಾರ ಸಂಜೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ 2025 ಜುಲೈ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಶೇ2:,ರಷ್ಟು ತುಟ್ಟಿ ಬತ್ತೆ ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ಮೂಲ ವೇತನ ಶೇಕಡ 12. 25 25 ರಿಂದ ಶೇಕಡ 14. 25ಕ್ಕೆ ಏರಿಕೆ ಮಾಡಲಾಗಿದೆ.

ಸರ್ಕಾರದ ಈ ಆದೇಶದಿಂದ ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ಇದು ಅನ್ವಯವಾಗಲಿದೆ. ಕಳೆದ ವರ್ಷ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಜಾರಿ ಮಾಡಲಾಗಿತ್ತು. ಸದ್ಯ ಈ ವರ್ಷ ಶೇಕಡಾ 1.50 ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿತ್ತು. ಹಾಲಿ ಜಾರಿಯಲ್ಲಿದ್ದ ಶೇಕಡಾ 10.75 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 12.25 ರಷ್ಟಕ್ಕೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ:-ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್‌ ಮೇಲೆ ಪಾಕ್‌ ವೈಮಾನಿಕ ದಾಳಿ, ಸಾವಿನ ಶಂಕೆ

ಈ ಹಿಂದೆ ನವೆಂಬರ್‌ನಲ್ಲಿ ತುಟ್ಟಿಭತ್ಯೆಯನ್ನು ಕರ್ನಾಟಕ ಸರ್ಕಾರಿ ಏರಿಸಿತ್ತು. ಮೂಲವೇತನದ ಶೇ 8.50ರಷ್ಟು ತುಟ್ಟಿ ಭತ್ಯೆಯನ್ನು ಆರ್ಥಿಕ ಇಲಾಖೆಯ ಆದೇಶದ ಬಳಿಕ ಅದನ್ನು ಶೇ 10.75ಕ್ಕೆ ಹೆಚ್ಚಿಸಲಾಗಿತ್ತು. ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ ನೌಕರರಿಗೆ ಇದರ ಉಪಯೋಗ ದೊರೆತಿತ್ತು.

ಏನಿದು ತುಟ್ಟಿ ಭತ್ಯೆ?
ತುಟ್ಟಿ ಭತ್ಯೆ (DA) ಎಂಬುದು ಸರ್ಕಾರವು ಸಾರ್ವಜನಿಕ ವಲಯದ ಹಾಲಿ ಮತ್ತು ನಿವೃತ್ತ ಸದಸ್ಯರಿಗೆ ಒದಗಿಸುವ ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದೆ. ಸರ್ಕಾರಿ ನೌಕರರ ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಡಿಎ ಜೀವನ ವೆಚ್ಚಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ, ಡಿಎ ಅಂಶವು ವಿಭಿನ್ನ ಉದ್ಯೋಗಿಗಳಿಗೆ ಅವರ ಸ್ಥಳವನ್ನು ಆಧರಿಸಿ ವಿಭಿನ್ನವಾಗಿರುತ್ತದೆ. ಇದರರ್ಥ ನಗರ ವಲಯ, ಅರೆ-ನಗರ ವಲಯ ಅಥವಾ ಗ್ರಾಮೀಣ ವಲಯದ ಉದ್ಯೋಗಿಗಳಿಗೆ ಡಿಎ ವಿಭಿನ್ನವಾಗಿರುತ್ತದೆ. ಕಾಲಕಾಲಕ್ಕೆ ಇದನ್ನು ಪರಿಷ್ಕರಣೆ ಮಾಡಲಾಗುತ್ತದೆ. ಕರ್ನಾಟಕದಲ್ಲೂ ಈ ಪರಿಷ್ಕರಣೆ ಈಗ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago