ರಾಜ್ಯ

ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ ಎಂದ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಪ್ರೀ ಕ್ಲಿನಿಕಲ್‌, ಪ್ಯಾರಾ ಕ್ಲಿನಿಕಲ್‌ ಮತ್ತು ಕ್ಲಿನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್‌, ಅನಸ್ತೇಷಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ : ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ : ಎಚ್‌ಡಿಕೆ ಆರೋಪ

ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್‌ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

2 hours ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

2 hours ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

2 hours ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

3 hours ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

3 hours ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

4 hours ago