ರಾಜ್ಯ

ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ ಎಂದ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಪ್ರೀ ಕ್ಲಿನಿಕಲ್‌, ಪ್ಯಾರಾ ಕ್ಲಿನಿಕಲ್‌ ಮತ್ತು ಕ್ಲಿನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್‌, ಅನಸ್ತೇಷಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ : ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ : ಎಚ್‌ಡಿಕೆ ಆರೋಪ

ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್‌ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

4 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

5 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

5 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

8 hours ago