ಮೈಸೂರು: ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.
ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮಿಸುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ಇದರ ಅನ್ವಯ ಮಾತ್ರ ಹಸಿರು ಪಟಾಕಿ ಸಿಡಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಯಲು ಮತ್ತು ಹಿರಿಯ ನಾಗರಿಕರ, ಪುಟ್ಟ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪಾಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ ಹಾಗೂ ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿ ಪ್ರಾಣಿ ಸಂಕುಲಗಳಿಗೆ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ದೀಪದಿಂದ ದೀಪ ಹಚ್ಚಿ ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಎಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…
ಮಂಜು ಕೋಟೆ ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಮಾಟ-ಮಂತ್ರ; ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಆಗ್ರಹ ಎಚ್.ಡಿ.ಕೋಟೆ:…
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…