ಮೈಸೂರು: ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.
ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮಿಸುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ಇದರ ಅನ್ವಯ ಮಾತ್ರ ಹಸಿರು ಪಟಾಕಿ ಸಿಡಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಯಲು ಮತ್ತು ಹಿರಿಯ ನಾಗರಿಕರ, ಪುಟ್ಟ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪಾಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ ಹಾಗೂ ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿ ಪ್ರಾಣಿ ಸಂಕುಲಗಳಿಗೆ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ದೀಪದಿಂದ ದೀಪ ಹಚ್ಚಿ ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಎಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…