ರಾಜ್ಯ

ಬಿಗ್‌ಬಾಸ್‌ ಬಂದ್‌ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ

ಬೆಂಗಳೂರು: ಬಿಗ್‌ಬಾಸ್‌ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಜಾಲಿವುಡ್‌ ಸ್ಟುಡಿಯೋ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಅವರು, ಡಿಕೆಶಿ ಅವರ ನಟ್ಟು ಬೋಲ್ಟ್‌ ಟೀಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ.

ಇದನ್ನು ಓದಿ : ಬಿಗ್‌ಬಾಸ್‌ ಮನೆಗೆ ಬೀಗ: ಹೈಕೋರ್ಟ್‌ ಮೊರೆ ಹೋದ ಜಾಲಿವುಡ್‌ ಸ್ಟುಡಿಯೋಸ್‌

ಡಿ.ಕೆ.ಶಿವಕುಮಾರ್‌ ಹೇಳಿದ ಮಾತಿಗೆ ತಳುಕು ಹಾಕುವುದು ಸರಿಯಲ್ಲ. ಜಾಲಿವುಡ್‌ ಸ್ಟುಡಿಯೋ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸ್ಟುಡಿಯೋದವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ತೀರ್ಪು ಬಂದ ಮೇಲೆ ತೀರ್ಮಾನ ಮಾಡಲಾಗುತ್ತದೆ. ಹೈಕೋರ್ಟ್‌ ಅನುಮತಿ ಪಡೆದು ಸ್ಟುಡಿಯೋ ನಡೆಸಲಿ. ಸ್ಟುಡಿಯೋ ಮಾಲೀಕರು ನೋಟಿಸ್‌ಗೆ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಬಂದ್‌ ಮಾಡಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

4 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

5 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

6 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

6 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

6 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

6 hours ago