ಬೆಂಗಳೂರು: ಮೇಕದಾಟು ಕ್ಯಾತೆ ಮತ್ತೆ ಮುನ್ನಲೆಗೆ ಬಂದಿದ್ದು, ಮಾಜಿ ಸಿಎಂ ಮತ್ತು ಡಿಸಿಎಂ ನಡುವೆ ಮತ್ತೆ ವಾಗ್ವಾದ ಮುಂದುವರೆದಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರ ಮೌನವನ್ನು ಪ್ರಶ್ನಿಸಿದ್ದಾರೆ.
ರಾಜಕೀಯಕ್ಕಾಗಿ ಚುನಾವಣೆಯನ್ನು ಬಳಿಸಿಕೊಳ್ಳುವ ನೀವು, ಅಧಿಕಾರದಲ್ಲಿದ್ದರು ಯಾಕೆ ಕೆಲಸ ಮಾಡುತ್ತಿಲ್ಲ. ಪ್ರಜೆಗಳು ನಿಮಗೆ ನೀಡಿರುವ ಪೆನ್ನು ಪೇಪರ್ ಹಿಡಿಯುವ ಶಕ್ತಿ ಕೇವಲ ೧೦ ತಿಂಗಳಿಗೆ ನಿಸ್ತೇಜವಾಯಿತೆ ಎಂದು ಖಾರವಾಗಿ ಟೀಕಿಸಿದ್ದಾರೆ.
ಮೇಕೆದಾಟು ಸಂಬಂಧ ಎಚ್ಡಿಕೆ ತಮ್ಮ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪ್ರಶ್ನೆಗಳ ಮಳೆಯನ್ನೇ ಸುರಿಸಿದ್ದಾರೆ.
ಎಚ್ಡಿಕೆ ಟ್ವೀಟ್ನಲ್ಲೇನಿದೆ?
ಅಧಿಕಾರ ಇರುವುದು ನಿಮ್ಮ(ಕಾಂಗ್ರೆಸ್) ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಡಿಕೆ ಶಿವಕುಮಾರ್ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.
ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ?
ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆ ಸರಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ!? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು? ಎಂದು ಪ್ರಶ್ನಿಸಿದ್ದಾರೆ.
2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, ₹100 ಕೋಟಿ ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್ ಸರ್ಕಾರ ಇತ್ತಲ್ಲಾ..? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ. ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ. 90ರ ಇಳಿವಯಸ್ಸಿನಲ್ಲಿಯೂ ಶ್ರೀ ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು! ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು.
ಆದರೆ, ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ!!’ ನಿಮ್ಮ ಸರಕಾರದಲ್ಲಿ ಏನೇನ್ ನಡೀತಿದೆ ಶಿವಕುಮಾರ್ ಅವರೇ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ.. ಹೇಗೆ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…