ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಜಲಾಶಯಗಳು ಭರ್ತಿಯಾದ ಪರಿಣಾಮ ನೀರಿನ ಹೊರಹರಿವು ಹೆಚ್ಚಾಗಿ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಬಗ್ಗೆ ಎಲ್ಲೆಡೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಎಲ್ಲರೂ ಜನರ ಜೊತೆ ನಿಲ್ಲಬೇಕು. ಇದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದರು.
ಸಚಿವರು ತಮ್ಮ ಕ್ಷೇತ್ರದ ವ್ಯಾಪ್ತಿ ಹಾಗೂ ಇತರೇ ಪ್ರವಾಹ ಪೀಡಿತ ಪ್ರದೇಶಗಳ ಶಾಸಕರ ಜೊತೆ ಸಂಪರ್ಕದಿಂದ ಇರಬೇಕು. ಶಾಸಕರ ಜೊತೆ ಸ್ಥಳಕ್ಕೆ ಭೇಟಿಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಬೇಕು.
ದೇವರ ಕೃಪೆಯಿಂದ ಈ ಬಾರಿ ಧಾರಾಕಾರ ಮಳೆಯಾಗಿದೆ. ಆದರೆ ಮಳೆಯಿಂದ ಉಂಟಾಗಿರುವ ಅವಘಡಗಳನ್ನು ನಾವು ಸರಿಮಾಡಬೇಕಿದೆ. ಹೀಗಾಗಿ ನಾವೆಲ್ಲಾ ಜನರ ಜೊತೆ ನಿಲ್ಲೋಣ ಎಂದು ಕರೆಕೊಟ್ಟಿದ್ದಾರೆ.
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…