ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಜಲಾಶಯಗಳು ಭರ್ತಿಯಾದ ಪರಿಣಾಮ ನೀರಿನ ಹೊರಹರಿವು ಹೆಚ್ಚಾಗಿ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಬಗ್ಗೆ ಎಲ್ಲೆಡೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಎಲ್ಲರೂ ಜನರ ಜೊತೆ ನಿಲ್ಲಬೇಕು. ಇದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದರು.
ಸಚಿವರು ತಮ್ಮ ಕ್ಷೇತ್ರದ ವ್ಯಾಪ್ತಿ ಹಾಗೂ ಇತರೇ ಪ್ರವಾಹ ಪೀಡಿತ ಪ್ರದೇಶಗಳ ಶಾಸಕರ ಜೊತೆ ಸಂಪರ್ಕದಿಂದ ಇರಬೇಕು. ಶಾಸಕರ ಜೊತೆ ಸ್ಥಳಕ್ಕೆ ಭೇಟಿಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಬೇಕು.
ದೇವರ ಕೃಪೆಯಿಂದ ಈ ಬಾರಿ ಧಾರಾಕಾರ ಮಳೆಯಾಗಿದೆ. ಆದರೆ ಮಳೆಯಿಂದ ಉಂಟಾಗಿರುವ ಅವಘಡಗಳನ್ನು ನಾವು ಸರಿಮಾಡಬೇಕಿದೆ. ಹೀಗಾಗಿ ನಾವೆಲ್ಲಾ ಜನರ ಜೊತೆ ನಿಲ್ಲೋಣ ಎಂದು ಕರೆಕೊಟ್ಟಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…