ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಜಲಾಶಯಗಳು ಭರ್ತಿಯಾದ ಪರಿಣಾಮ ನೀರಿನ ಹೊರಹರಿವು ಹೆಚ್ಚಾಗಿ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಬಗ್ಗೆ ಎಲ್ಲೆಡೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಎಲ್ಲರೂ ಜನರ ಜೊತೆ ನಿಲ್ಲಬೇಕು. ಇದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದರು.
ಸಚಿವರು ತಮ್ಮ ಕ್ಷೇತ್ರದ ವ್ಯಾಪ್ತಿ ಹಾಗೂ ಇತರೇ ಪ್ರವಾಹ ಪೀಡಿತ ಪ್ರದೇಶಗಳ ಶಾಸಕರ ಜೊತೆ ಸಂಪರ್ಕದಿಂದ ಇರಬೇಕು. ಶಾಸಕರ ಜೊತೆ ಸ್ಥಳಕ್ಕೆ ಭೇಟಿಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಬೇಕು.
ದೇವರ ಕೃಪೆಯಿಂದ ಈ ಬಾರಿ ಧಾರಾಕಾರ ಮಳೆಯಾಗಿದೆ. ಆದರೆ ಮಳೆಯಿಂದ ಉಂಟಾಗಿರುವ ಅವಘಡಗಳನ್ನು ನಾವು ಸರಿಮಾಡಬೇಕಿದೆ. ಹೀಗಾಗಿ ನಾವೆಲ್ಲಾ ಜನರ ಜೊತೆ ನಿಲ್ಲೋಣ ಎಂದು ಕರೆಕೊಟ್ಟಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…