ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ ಮಾರ್ಚ್.10ರಂದು ಬೆಂಗಳೂರಿನಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಲಾಗಿದೆ.
ಮಾರ್ಚ್.6ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026 ಮಂಡಿಸಲಿದ್ದಾರೆ. ಆದ್ದರಿಂದ ಮಾರ್ಚ್.10ರಂದು ಡಿಕೆಶಿವಕುಮಾರ್ ಡಿನ್ನರ್ ಪಾರ್ಟ ಆಯೋಜನೆ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಎಂಎಲ್ಸಿಗಳಿಗೆ ಡಿನ್ನರ್ ಪಾರ್ಟಿಗೆ ಆಹ್ವಾನ ನೀಡಲಾಗುತ್ತದೆ.





