ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆದ ಬೆನ್ನಲೇ ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಬಗ್ಗೆ ಕೆಪಿಸಿಸಿ ಕಾನೂನು ಘಟಕ ಪೊಲೀಸರಿಗೆ ದೂರು ನೀಡಿದೆ.
ಅಶ್ಲೀಲ ಚಿತ್ರವೊಂದಕ್ಕೆ ಡಿ.ಕೆ ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.
ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಿರುವ ಅಸಲಿ ಚಿತ್ರ ಬಿಜೆಪಿ ಮುಖಂಡನದ್ದಾಗಿದ್ದು, ಇದೀಗ ಆ ಎಡಿಟ್ ಚಿತ್ರವನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್, ಯುಟ್ಯೂಬ್, ಎಕ್ಸ್ ಖಾತೆಯಲ್ಲಿ ಹರಿಬಿಡಲಾಗಿದೆ. ಈ ಹಿನ್ನೆಲೆ ಆರೋಪಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾನೂನು ಘಟಕ ದೂರು ಸಲ್ಲಿಸಿತ್ತು. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…