ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ಕೊಡಲು ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ.
ಇದನ್ನೂ ಓದಿ:- ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಕೊಟ್ಟ ಮಾತಿನಂತೆ ಇದೀಗ ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆಯ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದೇವೆ. ಕರಾವಳಿ ಪ್ರವಾಸೋದ್ಯಮ, ಬಂದರು ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಪ್ಪುಪಟ್ಟಿ ಪ್ರದರ್ಶನ
ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.





