ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಲೈಂಗಿಕ ಕಿರುಕುಳ, ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ಡಿ ರೇವಣ್ಣ ಬಂಧನ ವಿರೋಧಿಸಿ ನಿನ್ನೆ (ಮೇ.7) ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಈ ಎಲ್ಲಾ ಪ್ರಕರಣಗಳ ಪ್ರಮುಖ ರೂವಾರಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಿದ್ದು, ಅವರನ್ನು ಅಮಾನತುಗೊಳಿಸುವಂತೆ ಕಟುವಾಗಿ ಟೀಕಿಸಿದ್ದರು.
ಈ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಎಚ್ಡಿಕೆ ಆರೋಪಗಳನ್ನೆಲ್ಲಾ ಅಲ್ಲೆಗೆಳೆದಿದ್ದಾರೆ. ಪೆನ್ಡ್ರೈವ್ ಪ್ರಕರಣದ ಹಿಂದಿರುವುದು ಬ್ಲಾಕ್ಮೇಲ್ ಕಿಂಗ್ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಪದೇ ಪದೇ ನನ್ನ ಹೆಸರು ಬಳಕೆ ಮಾಡುತ್ತಿದ್ದಾರೆ. ನನ್ನ ಹೆಸರು ಎತ್ತದಿದ್ದರೇ ಅವರಿಗೆ ನಿದ್ರೆ ಬರುವುದಿಲ್ಲ. ಇಲ್ಲ ಸಲ್ಲದ ಆರೋಪ ಮಾಡಿ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಟ್ವೀಟ್ನಲ್ಲೇನಿದೆ?
ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ಈ ಕೇಸಿನ ಹಿಂದೆ ಇರುವುದು ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ.
ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…