ರಾಜ್ಯ

ಪೆನ್‌ಡ್ರೈವ್‌ ಕೇಸಿನ ಹಿಂದೆ ಇರುವುದು ಬ್ಲಾಕ್‌ಮೇಲ್‌ ಕಿಂಗ್‌ ಕುಮಾರಸ್ವಾಮಿ: ಡಿಕೆಶಿ ಟಾಂಗ್‌

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಲೈಂಗಿಕ ಕಿರುಕುಳ, ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ವಿರೋಧಿಸಿ ನಿನ್ನೆ (ಮೇ.7) ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಈ ಎಲ್ಲಾ ಪ್ರಕರಣಗಳ ಪ್ರಮುಖ ರೂವಾರಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಗಿದ್ದು, ಅವರನ್ನು ಅಮಾನತುಗೊಳಿಸುವಂತೆ ಕಟುವಾಗಿ ಟೀಕಿಸಿದ್ದರು.

ಈ ಪ್ರಕರಣ ಸಂಬಂಧ ಟ್ವೀಟ್‌ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿದ್ದು, ಎಚ್‌ಡಿಕೆ ಆರೋಪಗಳನ್ನೆಲ್ಲಾ ಅಲ್ಲೆಗೆಳೆದಿದ್ದಾರೆ. ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವುದು ಬ್ಲಾಕ್‌ಮೇಲ್‌ ಕಿಂಗ್‌ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಪದೇ ಪದೇ ನನ್ನ ಹೆಸರು ಬಳಕೆ ಮಾಡುತ್ತಿದ್ದಾರೆ. ನನ್ನ ಹೆಸರು ಎತ್ತದಿದ್ದರೇ ಅವರಿಗೆ ನಿದ್ರೆ ಬರುವುದಿಲ್ಲ. ಇಲ್ಲ ಸಲ್ಲದ ಆರೋಪ ಮಾಡಿ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಟ್ವೀಟ್‌ನಲ್ಲೇನಿದೆ?

ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ.

ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

7 hours ago