ರಾಜ್ಯ

ಒಂದು ರೌಂಡ್‌ ಸೆಟಲ್‌ಮೆಂಟ್‌ ಆಗಿದೆ; ಈಶ್ವರಪ್ಪಗೆ ಟಾಂಗ್‌ ಕೊಟ್ಟ ಡಿಕೆಶಿ!

ಪ್ರತ್ಯೇಕ ರಾಷ್ಟ್ರದ ಕುರಿತು ಡಿಕೆ ಸುರೇಶ್‌ ನೀಡಿದ ಹೇಳಿಕೆಗೆ ಬಿಜೆಪಿಯ ನಾಯಕರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದು, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಇಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದರು.

ಈ ಕುರಿತು ಇಂದು ( ಫೆಬ್ರವರಿ 10 ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಕೆಎಸ್‌ ಈಶ್ವರಪ್ಪನ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿಕೆ ಸುರೇಶ್‌ ಮೈಯಲ್ಲಿ ಹರಿಯುತ್ತಿಲ್ಲ, ನಮ್ಮ ಸುದ್ದಿಗೆ ಬಂದವರಿಗೆ ಒಂದೇ ಹಂತದಲ್ಲಿ ಸೆಟಲ್‌ಮೆಂಟ್‌ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ.

“ಈಶ್ವರಪ್ಪ ಕ್ಷಮೆ ಕೇಳಲಿ ಅಂತ ನಾನು ಹೇಳುತ್ತಿಲ್ಲ. ಅವರ ಒಂದು ರೌಂಡ್‌ ಸೆಟಲ್‌ಮೆಂಟ್‌ ಆಗಿದೆ. ಅಸೆಂಬ್ಲಿಯಲ್ಲಿ ಏನೋ ಮಾತನಾಡಿದ್ದರು. ನಮ್ಮ ತಂದೆಯನ್ನು ನೆನಪಿಸಿಕೊಂಡಿದ್ರು. ಇವಾಗ ಎಲ್ಲಿದ್ದಾರೆ ಈಶ್ವರಪ್ಪ? ನಮ್ಮ ಸುದ್ದಿಗೆ ಯಾರಾರು ಬಂದಿದ್ದಾರೋ ಅವರದ್ದೆಲ್ಲಾ ಒಂದೊಂದೇ ಹಂತದಲ್ಲಿ ಸೆಟಲ್‌ಮೆಂಟ್‌ ಆಗ್ತಿದೆ. ಗುಂಡಿಕ್ಕಿ ಕೊಲ್ಲಬೇಕು ಅಂತಾರೆ, ಕೊಲ್ಲಲಿ ಬಿಡಿ. ಈ ಬೆದರಿಕೆಗೆಲ್ಲಾ ಹೆದರೋ ರಕ್ತ ಅಲ್ಲ ಡಿಕೆ ಸುರೇಶ್‌ ಅವರದ್ದು” ಎಂದು ಹೇಳಿದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

1 hour ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

2 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

2 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

2 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

2 hours ago