ಬೆಂಗಳೂರು: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮ ದಿನದ ಸಂದರ್ಭದಲ್ಲಿ ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಕೂಡ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್ ಅಹಮ್ಮದ್ ಖಾನ್
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಜನ್ಮದಿನದ ಶುಭಕೋರುವ ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ನಮ್ಮ ಯೋಧರ ಜೊತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…